ಮಂಗಳವಾರ ಇಲ್ಲಿಯ ವಿಶೇಷ ನ್ಯಾಯಾಲಯದಲ್ಲಿ ಜಯಲಲಿತಾ ಅವರ ಅಕ್ರಮ ಆಸ್ತಿ ಪ್ರಕರಣದ ಕುರಿತು ವಿಚಾರಣೆ ಆರಂಭವಾದಾಗ, ಜಯಲಲಿತಾ ಅವರ ವಕೀಲ ಎ. ಕಂದಸಾಮಿ ಅವರು, ಸುಪ್ರೀಂ ಕೋರ್ಟ್ ನಲ್ಲಿ ಖುದ್ದು ಹಾಜರಿ ವಿನಾಯಿತಿಯ ಕುರಿತು ವಿಚಾರಣೆ ನಡೆಯುತ್ತಿದ್ದು, ಸೆ 12 ರಂದು ತೀರ್ಮಾನ ಪ್ರಕಟಗೊಳ್ಳುವ ಸಾಧ್ಯತೆ ಇದೆ ಎಂದು ತಿಳಿಸಿ, ಸಿಆರ್ಪಿಸಿ ಸೆಕ್ಷನ್ 309ರ ಅಡಿಯಲ್ಲಿ ಅರ್ಜಿ ಸಲ್ಲಿಸಿ ಎರಡು ವಾರಗಳ ಕಾಲ ಇಲ್ಲಿನ ಪ್ರಕರಣದ ವಿಚಾರಣೆಯನ್ನು ಮುಂದೂಡುವಂತೆ ಮನವಿ ಮಾಡಿಕೊಂಡರು.
ಪ್ರಕರಣದ ವಿಚಾರಣೆಯನ್ನು ಮುಂದೂಡುವಂತೆ ಅರ್ಜಿದಾರರ ಪರ ವಕೀಲರ ವಿಶೇಷ ಮನವಿಗೆ ಸಹಾಯಕ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಸಂದೇಶ್ ಚೌತ ಅವರು ಸಮ್ಮತಿಸಿದರು.