ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾತಿ ನಿರ್ಮೂಲನೆಗೆ ಬಿಎಸ್‌ಪಿ

Last Updated 4 ಅಕ್ಟೋಬರ್ 2012, 8:10 IST
ಅಕ್ಷರ ಗಾತ್ರ

ಮಧುಗಿರಿ: ದೇಶದಲ್ಲಿರುವ ಜಾತೀಯತೆ, ಬಡತನ ಹೋಗಲಾಡಿಸಿ, ಕುಲ ಕಸುಬಗಳಿಂದ ಸೃಷ್ಟಿಯಾಗಿರುವ ಜಾತಿ ಆಧಾರದ ಮೇಲೆ ಕೀಳು, ಬಡವ-ಶ್ರೀಮಂತ ಎಂಬ ಅಸಮಾನತೆಯಿಂದ ಬದುಕುತ್ತಿರುವ ಮಾನವ ಸಮಾಜವನ್ನು ಒಂದುಗೂಡಿಸುವ ಉದ್ದೇಶದಿಂದ ಬಿಎಸ್‌ಪಿ ಉದಯವಾಗಿದೆ ಎಂದು ಉತ್ತರ ಪ್ರದೇಶದ ವಿಧಾನ ಪರಿಷತ್ ಸದಸ್ಯ, ಪಕ್ಷದ ಕರ್ನಾಟಕದ ಉಸ್ತುವಾರಿ ಡಾ.ಅಶೋಕ್‌ಸಿದ್ದಾರ್ಥ ತಿಳಿಸಿದರು.

ಪಟ್ಟಣದಲ್ಲಿ ಬುಧವಾರ ನಡೆದ ವಿಧಾನಸಭಾ ಕ್ಷೇತ್ರದ ಪದಾಧಿಕಾರಿಗಳ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಧರ್ಮ-ಧರ್ಮಗಳ ನಡುವೆ ನಡೆಯುತ್ತಿರುವ ದೌರ್ಜನ್ಯ, ದಬ್ಬಾಳಿಕೆ ನಿಲ್ಲಬೇಕಾದರೆ ದಲಿತ, ಹಿಂದುಳಿದ ಅಲ್ಪಸಂಖ್ಯಾತರು ಹಾಗೂ ಮೇಲ್ಜಾತಿಗಳಲ್ಲಿರುವ ಬಡವರು ರಾಜ್ಯಾಧಿಕಾರ ಪಡೆಯಲು ಬಹುಜನ ಸಮಾಜ ಪಕ್ಷಕ್ಕೆ ಮತ ಚಲಾಯಿಸಬೇಕು ಎಂದು ಮನವಿ ಮಾಡಿದರು.

ತಾಲ್ಲೂಕು ಘಟಕದ ಅಧ್ಯಕ್ಷ ದೊಡ್ಡೇರಿ ಕಣಿಮಯ್ಯ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಘಟಕದ ಅಧ್ಯಕ್ಷ ಮಾರಸಂದ್ರ ಮುನಿಯಪ್ಪ, ಖಜಾಂಚಿ ಕೋರಮಂಗಲ ಮುನಿಯಪ್ಪ, ಕಾರ್ಯದರ್ಶಿ ವೆಂಕಟಗಿರಿಯಪ್ಪ, ಜಿಲ್ಲಾ ಅಧ್ಯಕ್ಷ ಮಾರನಹಳ್ಳಿ ಶಿವಣ್ಣ, ಉಪಾಧ್ಯಕ್ಷ ದಿಲೀಪ್ ಮಾತನಾಡಿದರು.


ಜಿಲ್ಲಾ ಕಾರ್ಯದರ್ಶಿ ಅಂಜಯ್ಯ, ಸಂಯೋಜಕ ಬೆಳದಮಡುಗು ಶಿವಣ್ಣ, ತಾಲ್ಲೂಕು ಉಪಾಧ್ಯಕ್ಷ ತೊಂಡೋಟಿ ರಾಮಾಂಜಿ, ಕೋಟೆ ಕಲ್ಲಪ್ಪ, ಕಾರ್ಯದರ್ಶಿ ಲಕ್ಷ್ಮೀನಾರಾಯಣ, ಹನುಮಂತರಾಯ, ನಗರ ಘಟಕದ ಅಧ್ಯಕ್ಷ ಬೆಟ್ಟಪ್ಪ, ಮುಖಂಡರಾದ ಶಂಕರ್, ಸರೋಜಮ್ಮ ಇತರರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT