ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾನಪದ ಅಕಾಡೆಮಿಗೆ ಅನುದಾನ ಹೆಚ್ಚಿಸಿ

Last Updated 9 ಜುಲೈ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು:  `ಕರ್ನಾಟಕ ಜಾನಪದ ಅಕಾಡೆಮಿಗೆ ವಾರ್ಷಿಕ 2 ಕೋಟಿ ರೂಪಾಯಿಯ ಅನುದಾನ ಒದಗಿಸುವುದರೊಂದಿಗೆ ಜಾನಪದ ಕಲೆಯ ಬರಹವನ್ನು ಪಠ್ಯದಲ್ಲಿ ಅಳವಡಿಸುವ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳಬೇಕು~ ಎಂದು ಅಕಾಡೆಮಿಯ ಅಧ್ಯಕ್ಷ ಬಾನಂದೂರು ಕೆಂಪಯ್ಯ ಮನವಿ ಮಾಡಿದರು.

  ತಮ್ಮ ಅಧಿಕಾರಾವಧಿಯಲ್ಲಿ ಕೈಗೊಳ್ಳಲಿರುವ ಕಾರ್ಯಕ್ರಮಗಳ ಕುರಿತು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, `ಸರ್ಕಾರ 45 ಲಕ್ಷ ರೂಪಾಯಿ ಅನುದಾನವನ್ನು ಒದಗಿಸುತ್ತಿದ್ದು, ಜಾನಪದ ಕಲಾವಿದರ ಕ್ಷೇಮನಿಧಿಗೆ 20 ಲಕ್ಷ ರೂಪಾಯಿ ಬಿಡುಗಡೆ ಮಾಡಿದೆ. ಗ್ರಾಮೀಣ ಭಾಗದಲ್ಲೇ ಹೆಚ್ಚಾಗಿ ವಾಸಿಸುವ ಜಾನಪದ ಕಲಾವಿದರಲ್ಲಿ ಬಹುತೇಕರು ಕಡುಬಡವರಿದ್ದು, ಹೆಚ್ಚಿನ ಅನುದಾನ ಅಗತ್ಯವಿದೆ~ ಎಂದರು. 

ಬುಡಕಟ್ಟು, ಕರಕುಶಲ ಹಾಗೂ ಜಾನಪದ ಕಲೆ ಪರಿಚಯಿಸಲು ದಕ್ಷಿಣ ಭಾರತ ಜಾನಪದ ಸಮಾವೇಶಹಮ್ಮಿಕೊಳ್ಳಲಾಗುವುದು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT