ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾನಪದ ಪ್ರಚುರಪಡಿಸಿದವರು ಜೀಶಂಪ:ಹಿರಿಯ ಸಾಹಿತಿ ಜವರೇಗೌಡ

Last Updated 7 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: `ಜಾನಪದ ವಿಶ್ವವಿದ್ಯಾಲಯ ಸ್ಥಾಪನೆಯ ಕನಸು ಕಂಡಿದ್ದ ಜೀ.ಶಂ. ಪರಮಶಿವಯ್ಯ ಅವರು ರಾಜ್ಯದ ಜಾನಪದ ಸಂಸ್ಕೃತಿಯನ್ನು ರಾಷ್ಟ್ರೀಯ ಮಟ್ಟದಲ್ಲಿ ಪ್ರಚುರಪಡಿಸಿದ ಮಹಾನ್ ಚೇತನ~ ಎಂದು ಹಿರಿಯ ಸಾಹಿತಿ ದೇ.ಜವರೇಗೌಡ ಶ್ಲಾಘಿಸಿದರು.

ಸಾಗರ್ ಪ್ರಕಾಶನವು ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಭಾನುವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ `ಜೀಶಂಪ ಜಾನಪದ ಮತ್ತು ಸೃಜನಶೀಲ ಸಾಹಿತ್ಯಮಾಲೆ~ಯನ್ನು ಬಿಡುಗಡೆ ಮಾಡಿ ಅವರು ಮಾತನಾಡಿದರು.
`ಜಾನಪದ ಸಂಸ್ಕೃತಿಗೆ ವೈಜ್ಞಾನಿಕ ಆಯಾಮ ತಂದುಕೊಟ್ಟವರಲ್ಲಿ ಜೀಶಂಪ ಅವರು ಮೊದಲಿಗರು. ಯಡಿಯೂರಪ್ಪ ಅವರ ಬಗ್ಗೆ ಎಷ್ಟೇ ಆರೋಪಗಳಿದ್ದರೂ ಜೀಶಂಪ ಅವರ ಜಾನಪದ ವಿ.ವಿ. ಸ್ಥಾಪನೆಯ ಕನಸನ್ನು ಈಡೇರಿಸಿದ್ದಾರೆ~ ಎಂದು ಹೇಳಿದರು.

`ರಾಜಕಾರಣಿಗಳು, ಶಿಕ್ಷಕರು ಇಂಗ್ಲಿಷ್ ಭಾಷೆಯ ವಾರಸುದಾರರಂತೆ ವರ್ತಿಸುತ್ತಿದ್ದಾರೆ. ಇಂಗ್ಲಿಷ್ ಕಲಿಕೆ ಕಡ್ಡಾಯವಾಗುತ್ತಿರುವುದು ಒಂದು ರೀತಿಯ ಆತಂಕದ ವಿಚಾರ. ಈ ನಡುವೆ ಯುವ ಪೀಳಿಗೆಗೆ ಜಾನಪದ ಸಂಸ್ಕೃತಿಯ ಬಗ್ಗೆ ಅರಿವಿಲ್ಲದೇ ಇರುವುದು ಆತಂಕದ ವಿಚಾರ~ ಎಂದು ಹೇಳಿದರು.

`ವಿಶ್ವದ ವಿವಿಧ ಭಾಗಗಳಲ್ಲಿರುವ ಜಾನಪದ ವಿ.ವಿಗಳೊಂದಿಗೆ ನಿರಂತರ ಸಂಪರ್ಕವಿಟ್ಟುಕೊಂಡು ತುಲನಾತ್ಮಕ ಅಧ್ಯಯನ ನಡೆಸಬೇಕು. ಜಾನಪದ ಕ್ಷೇತ್ರದಲ್ಲಿ ಸಾಕಷ್ಟು ಸಂಶೋಧನೆಗಳನ್ನು ನಡೆಸಲು ವಿದ್ವಾಂಸರು ಮುಂದಾಗಬೇಕು~ ಎಂದು ಸಲಹೆ ನೀಡಿದರು.

ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಅಂಬಳಿಕೆ ಹಿರಿಯಣ್ಣ, `ಈ ಸಮಗ್ರ ಸಾಹಿತ್ಯ ಮಾಲೆಯೂ ಜಾನಪದ ವಿ.ವಿಯ ನಡೆಯಲಿರುವ ಉನ್ನತ ಅಧ್ಯಯನಕ್ಕೆ ಸಹಕಾರಿಯಾಗಲಿದೆ~ ಎಂದು ಹೇಳಿದರು.
ಕನ್ನಡ ವಿ.ವಿ ವಿಶ್ರಾಂತ ಕುಲಪತಿ ಪ್ರೊ.ಎಚ್.ಜೆ. ಲಕ್ಕಪ್ಪಗೌಡ,  ಶಾರದಾ ಜೀ.ಶಂ. ಪರಮಶಿವಯ್ಯ ಇತರರು ಉಪಸ್ಥಿತರಿದ್ದರು.

`ಸೂಕ್ತ ನಿರ್ಧಾರ ಕೈಗೊಳ್ಳಿ~
`ಕಾವೇರಿ ನೀರು ಹಂಚಿಕೆ ವಿವಾದದ ವಿಚಾರದಲ್ಲಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಎರಡು ರಾಜ್ಯಗಳಿಗೂ ಅನ್ಯಾಯವಾಗದಂತೆ ಸೂಕ್ತ ನಿರ್ಧಾರ ತೆಗೆದುಕೊಳ್ಳಬೇಕು~ ಎಂದು ಹಿರಿಯ ಸಾಹಿತಿ ದೇ.ಜವರೇಗೌಡ ಒತ್ತಾಯಿಸಿದರು.
`ನಾಡು- ನುಡಿಯ ವಿಚಾರದಲ್ಲಿ ರಾಜಕೀಯ ಪಕ್ಷಗಳು ರಾಜಕೀಯಕ್ಕೆ ಆಸ್ಪದ ನೀಡದೇ ನಾಗರಿಕ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಹೆಜ್ಜೆ ಇಡಬೇಕು. ಈ ನಿಟ್ಟಿನಲ್ಲಿ ಕಾವೇರಿ ನೀರಿನ ವಿವಾದ ಆದಷ್ಟು ಬೇಗ ಬಗೆಹರಿಯಲಿ~ ಎಂದು ಆಶಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT