ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾನುವಾರು ಅಕ್ರಮ ಸಾಗಣೆ ಬೆಳಕಿಗೆ

Last Updated 9 ಸೆಪ್ಟೆಂಬರ್ 2011, 9:40 IST
ಅಕ್ಷರ ಗಾತ್ರ

ಗುಂಡ್ಲುಪೇಟೆ: ತಾಲ್ಲೂಕಿನ ಕೊತ್ತಲವಾಡಿ ಕಡೆಯಿಂದ ತಮಿಳುನಾಡಿನ ಕುನ್ನೂರಿನ ಮೂಲಕ ಕೇರಳಕ್ಕೆ ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ಜಾನುವಾರುಗಳನ್ನು ತೆರಕಣಾಂಬಿ ಠಾಣೆ ಪೊಲೀಸರು ಗುರುವಾರ ವಶಕ್ಕೆ ಪಡೆದುಕೊಂಡಿದ್ದಾರೆ.

ಎರಡು ಹಸು, ಎರಡು ಎತ್ತು ಹಾಗೂ ಒಂಭತ್ತು ಕರುಗಳನ್ನು ವಶಕ್ಕೆ ತೆಗೆದುಕೊಂಡು ನಂತರ ಮೈಸೂರಿನ ಪಿಂಜರಾಪೋಲ್‌ಗೆ ಕಳುಹಿಸಿ ಕೊಡಲಾಗಿದೆ.

ಭೀಮನಬೀಡು ಗ್ರಾಮದ ಜಗ್ಗು, ಮುದ್ದಶೆಟ್ಟಿ, ಅಣ್ಣೂರು ಗ್ರಾಮದ ಶಿವ, ಕಗ್ಗಳ ಗ್ರಾಮದ ಚನ್ನಬಸಪ್ಪ ಎಂಬುವರು ಜಾನುವಾರುಗಳನ್ನು ಕೇರಳದ ಕಡೆಗೆ ಸಾಗಿಸಲು ಯತ್ನಿಸುತ್ತಿದ್ದರು. ಈ ವೇಳೇ ತೆರಕಣಾಂಬಿ ಠಾಣೆ ಸಬ್ ಇನ್‌ಸ್ಪೆಕ್ಟರ್ ಕುಮಾರ್ ನೇತೃತ್ವದಲ್ಲಿ ತೆರಕಣಾಂಬಿ ಸಮೀಪ ದಾಳಿ ನಡೆಸಿ ಅವುಗಳನ್ನು ವಶಪಡಿಸಿಕೊಂಡರು. ಆರೋಪಿಗಳನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT