ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾನುವಾರು ಕೊಂದ ಚಿರತೆ ಸೆರೆ

Last Updated 9 ಡಿಸೆಂಬರ್ 2013, 19:30 IST
ಅಕ್ಷರ ಗಾತ್ರ

ಮೈಸೂರು/ಸರಗೂರು: ಎಚ್‌.ಡಿ. ಕೋಟೆ ತಾಲ್ಲೂಕಿನ ಜಕ್ಕಹಳ್ಳಿಯಲ್ಲಿ ಜಾನು­ವಾರು ಮೇಲೆ ದಾಳಿ ನಡೆಸಿದ್ದ ಚಿರತೆ­ಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೋಮವಾರ ಬೆಳಗಿನ ಜಾವ ಸೆರೆ ಹಿಡಿ­ದಿದ್ದಾರೆ. ಮೂರು ದಿನಗಳಿಂದ ಸೃಷ್ಟಿ­ಯಾ­ಗಿದ್ದ ಆತಂಕದ ವಾತಾವರಣ ಇದರೊಂದಿಗೆ ದೂರವಾಗಿದೆ.

ಸರಗೂರು ಪಟ್ಟಣದಿಂದ 8 ಕಿ.ಮೀ. ದೂರದ ಜಕ್ಕಹಳ್ಳಿಯಲ್ಲಿ ಚಿರತೆ­ಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಶನಿ­ವಾರ  ಕಾರ್ಯಾಚರಣೆ ಆರಂಭಿಸಿತ್ತು.

ಕಬ್ಬಿನ ಗದ್ದೆಗಳೇ ಹೆಚ್ಚಾಗಿರುವ ಅರಣ್ಯ­ದಂಚಿನ ಗ್ರಾಮದ ಎರಡು ಕಡೆ ಬೋನು­ಗಳನ್ನು ಇಡಲಾಗಿತ್ತು. ಬೋನಿನ­ಲ್ಲಿದ್ದ ಮಾಂಸವನ್ನು ಭಕ್ಷಿಸಲು ಬರುವ ಚಿರತೆಗಾಗಿ ಅರಣ್ಯ ಇಲಾಖೆ ಸಿಬ್ಬಂದಿ ಕಾದು ಕುಳಿತಿದ್ದರು. ಸೋಮವಾರ ಬೆಳಗಿನ ಜಾವ 5 ಗಂಟೆಯ ಹೊತ್ತಿಗೆ ಬೋನಿನಲ್ಲಿ ಚಿರತೆ ಸೆರೆಯಾಗಿದೆ. 3ವರ್ಷ ಪ್ರಾಯದ ಈ ಹೆಣ್ಣು ಚಿರತೆ­ಯನ್ನು ನಾಗರಹೊಳೆ ರಾಷ್ಟ್ರೀಯ ಉದ್ಯಾನ­ದ ಆನೆಚೌಕೂರು ಪ್ರದೇಶದಲ್ಲಿ ಬಿಡ­ಲಾಗಿದೆ ಎಂದು ಉಪ ಅರಣ್ಯ ಸಂರಕ್ಷಣಾ­ಧಿಕಾರಿ ಎಸ್‌.ಡಿ. ಗಾಂವ್ಕರ್‌ ಖಚಿತಪಡಿಸಿದ್ದಾರೆ.

‘ಡಿ. 6ರಂದು ಜಾನುವಾರುವನ್ನು ಕೊಂದಿದ್ದು ಹುಲಿ ಇರಬಹುದು ಎಂಬ ಗುಮಾನಿ ಹುಟ್ಟಿ­ಕೊಂಡಿತ್ತು. ದಾಳಿಗೆ ಒಳಗಾದ ಜಾನು­ವಾರುವಿನ ಅವಶೇಷ­ಗಳನ್ನು ಪರಿಶೀಲನೆ ಮಾಡಿದಾಗ ಅದು ಚಿರತೆ ಎಂಬುದು ಖಚಿತವಾಯಿತು. ಹೀಗಾಗಿ, ಶಿವಕುಮಾರ್‌ ಮತ್ತು ಸ್ವಾಮಿ ಎಂಬುವವರ ಜಮೀನಿನಲ್ಲಿ ಬೋನು­ಗಳನ್ನು ಇಡಲಾಗಿತ್ತು’ ಎಂದು ಅವರು ತಿಳಿಸಿದರು.

ಚಿರತೆ ಸೆರೆ ಹಿಡಿದ ವಿಷಯ ತಿಳಿಯುತ್ತಿದ್ದಂತೆ ಸುತ್ತಲಿನ ಗ್ರಾಮಸ್ಥರು ಜಕ್ಕಹಳ್ಳಿಯಲ್ಲಿ ನೆರೆದರು. ‘ತಾಲ್ಲೂಕಿ­ನಲ್ಲಿ ಕಾಡುಪ್ರಾಣಿಗಳ ಹಾವಳಿ ಹೆಚ್ಚಾ­ಗಿದೆ. ಕಾಡಂಚಿನ ಜಮೀನಿನಲ್ಲಿ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ. ಹುಲಿ, ಆನೆ, ಚಿರತೆಗಳು ಒಂದಾದ ಮೇಲೊಂದ­ರಂತೆ ದಾಳಿ ನಡೆಸುತ್ತಿವೆ. ಅರಣ್ಯ ಇಲಾಖೆ ಅಧಿಕಾರಿಗಳು ಇದನ್ನು ಗಂಭೀರ­­­ವಾಗಿ ಪರಿಗಣಿಸುತ್ತಿಲ್ಲ. ಸಿಬ್ಬಂದಿ ಸರಿಯಾಗಿ ಕಾರ್ಯನಿರ್ವಹಿ­ಸುತ್ತಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT