ನವದೆಹಲಿ (ಪಿಟಿಐ): ಮಾಜಿ ಗಗನಸಖಿ ಗೀತಿಕಾ ಶರ್ಮಾ ಆತ್ಮಹತ್ಯೆ ಪ್ರಕರಣದಲ್ಲಿ ಹರಿಯಾಣದ ಮಾಜಿ ಸಚಿವ ಗೋಪಾಲ್ ಗೋಯಲ್ ಕಾಂಡಾ ಅವರಿಗೆ ನಿರೀಕ್ಷಣಾ ಜಾಮೀನು ನೀಡುವ ಸಂಬಂಧದ ಆದೇಶವನ್ನು ದೆಹಲಿ ಹೈಕೋರ್ಟ್ ಮಂಗಳವಾರ ಕಾದಿರಿಸಿದೆ.
`ಗೀತಿಕಾ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಿ (ಕಾಂಡಾ) ಮತ್ತು ಆತನ ಉದ್ಯೋಗಿ ಅರುಣಾ ಛಡ್ಡಾ ಅವರ ಒಳಸಂಚಿನ ಬಗ್ಗೆ ವಿಚಾರಣೆ ನಡೆಸಲು ಬಂಧನ ಅಗತ್ಯವಾಗಿದ್ದು, ಜಾಮೀನು ನೀಡಬಾರದು~ ಎಂದು ಹೆಚ್ಚುವರಿ ಸಾಲಿಸಿಟರ್ ಜನರಲ್ (ಎಎಸ್ಜಿ) ಸಿದ್ದಾರ್ಥ ಲಥರಾ ಅವರು ನ್ಯಾಯಮೂರ್ತಿ ಪಿ.ಕೆ. ಭಾಸಿನ್ ಅವರಿಗೆ ಮನವಿ ಸಲ್ಲಿಸಿದರು.
ಲೋಕಸಭೆಯಲ್ಲಿ ಪ್ರತಿಧ್ವನಿಸಿದ ಪ್ರಕರಣ: ಮಾಜಿ ಗಗನಸಖಿ ಗೀತಿಕಾ ಶರ್ಮಾ ಆತ್ಮಹತ್ಯೆ ಪ್ರಕರಣ ಮಂಗಳವಾರ ಲೋಕಸಭೆಯಲ್ಲಿ ಪ್ರತಿಧ್ವನಿಸಿತು.
ಈ ದುರಂತಕ್ಕೆ ಕಾರಣ ಎನ್ನಲಾದ ಹರಿಯಾಣದ ಮಾಜಿ ಸಚಿವರನ್ನು ತಕ್ಷಣವೇ ಬಂಧಿಸುವಂತೆ ಬಿಜೆಪಿ ಸದಸ್ಯರು ಒತ್ತಾಯಿಸಿದರು.
ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ವೀರೇಂದ್ರ ಕಶ್ಯಪ್ ಅವರು, ಆತ್ಯಹತ್ಯೆ ಮಾಡಿ ಕೊಂಡ ಮಹಿಳೆಯ ಕುಟುಂಬಕ್ಕೆ ಕೇಂದ್ರ ಸರ್ಕಾರ ಸೂಕ್ತ ನ್ಯಾಯ ಒದಗಿಸಬೇಕು ಎಂದರು.