ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾವಗಲ್‌ನಲ್ಲಿ ಬರಗಾಲ: ಕಂಗಾಲಾದ ರೈತರು

Last Updated 26 ಸೆಪ್ಟೆಂಬರ್ 2011, 9:40 IST
ಅಕ್ಷರ ಗಾತ್ರ

ಜಾವಗಲ್: ಶಾಶ್ವತ ಬರಗಾಲ ಹಣೆಪಟ್ಟಿ ಕಟ್ಟಿಕೊಂಡಿರುವ ಹಾಗೂ ಮುಗಿಲ ಮಳೆಯನ್ನಷ್ಟೇ ಆಶ್ರಯಿಸಿಕೊಂಡಿರುವ ಜಾವಗಲ್ ಹೋಬಳಿಗೆ ಈ ಬಾರಿಯೂ ಮತ್ತೆ ಬರಗಾಲ ಒಕ್ಕರಿಸಿಕೊಂಡಿದೆ.

ಗ್ರಾಮೀಣ ಭಾಗದಲ್ಲಿ ನಾಟಿ ಮಾಡಿರುವ ರಾಗಿ ಒಣಗುತ್ತಿದ್ದು, ರೈತರು ತೀವ್ರ ಕಂಗಾಲಾಗಿದ್ದಾರೆ. 
ಪ್ರಸಕ್ತ ವರ್ಷ ವರುಣನ ಅವಕೃಪೆಗೆ ಒಳಗಾಗಿ ಬರದ ಛಾಯೆ ಕಾಣಿಸಿಕೊಂಡಿದೆ. ಈ ಹೋಬಳಿಯ ಜನ ಕೃಷಿಯನ್ನೇ ನಂಬಿ ಜೀವನ ಸಾಗಿಸುತ್ತಿದ್ದಾರೆ. ಮುಂಗಾರು ವೈಫಲ್ಯ ಹೋಬಳಿ ರೈತ ಸಮುದಾಯದ ಪಾಲಿಗೆ ಅಕ್ಷರಶಃ ಶಾಪವಾಗಿ ಪರಿಣಮಿಸಿದೆ.

ಜುಲೈ ಅಂತ್ಯಕ್ಕೆ 300ಮಿ.ಮಿ. ವಾಡಿಕೆ ಮಳೆ ಆಗ ಬೇಕಾಗಿತ್ತು. ಆದರೆ ಈ ಬಾರಿ ಮಳೆ ಬಾರಿ ಕಡಿಮೆಯಾಗಿದೆ. ಈಗಾಗಲೆ 9 ಹೆಕ್ಟೇರ್ ಪ್ರದೇಶದಲ್ಲಿ ರಾಗಿ ಬಿತ್ತನೆಯಾಗಬೇಕಾಗಿತ್ತು. ಹೋಬಳಿಯಲ್ಲಿ ಮಳೆಯ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗಿರುವ ಕಾರಣ ಬಿತ್ತನೆ ಕಾರ್ಯ ಕುಂಠಿತಗೊಂಡಿದೆ. ಈಗ 6 ಸಾವಿರ ಹೆಕ್ಟೇರ್‌ನಲ್ಲಿ ಬಿತ್ತನೆ ಕಾರ್ಯ ನಡೆದಿದೆ. ರೈತರು ಪ್ರತಿ ದಿನ ಮುಗಿಲು ನೋಡುವಂತಾಗಿದ್ದು, ಈ ಬಾರಿ ರೈತರ ಕನಸೆಲ್ಲ ನುಚ್ಚು ನೂರಾಗಿದೆ.

ಜಾವಗಲ್ ಹೋಬಳಿಯ ಪ್ರಮುಖ ಬೆಳೆ ರಾಗಿ ಬಿತ್ತನೆಗೆ ಕಾಲಾವಕಾಶ ಮುಗಿದಿದೆ. ಇದರಿಂದ ರೈತರು ಸಂಕಷ್ಟದಲ್ಲಿದ್ದಾರೆ. ಬಯಲು ಸೀಮೆಯ ಹಣೆಪಟ್ಟಿ ಹೊಂದಿರುವ ಈ ಹೋಬಳಿಗೆ ನೀರಾವರಿ ಮರೀಚಿಕೆಯಾಗಿದೆ. ಅಗತ್ಯ ಸಂದರ್ಭದಲ್ಲಿ ವರುಣನು ರೈತರಿಗೆ ಕೈಕೊಟ್ಟಿರುವುದರಿಂದ ಅನ್ನದಾತ ಮುಗಿಲಿನತ್ತ ಮುಖ ಮಾಡುವಂತಾಗಿದೆ. ಹೀಗಾಗಿ ರಾಜ್ಯ ಸರ್ಕಾರ ಬರಪೀಡಿತ ಪಟ್ಟಿಗೆ ಸೇರಿಸಿ ಪರಿಹಾರನೀಡ ಬೇಕೆಂಬುದು ರೈತರ ಒತ್ತಾಯ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT