ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿ-20 ದೇಶಗಳಿಗೆ ಮೂನ್ ಸಲಹೆ

Last Updated 29 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ವಿಶ್ವಸಂಸ್ಥೆ (ಪಿಟಿಐ): ಜಾಗತಿಕ ಆರ್ಥಿಕ ಅಸ್ಥಿರತೆಯಿಂದ ಜನರಲ್ಲಿ ಸೃಷ್ಟಿಯಾಗಿರುವ ಹತಾಶೆಗೆ ಮುಂಬರುವ `ಜಿ-20~ ಶೃಂಗಸಭೆಯಲ್ಲಿ ಪರಿಹಾರ ಕಂಡುಹಿಡಿಯಬೇಕು ಎಂದು ವಿಶ್ವಸಂಸ್ಥೆ ಮಹಾ ಕಾರ್ಯದರ್ಶಿ ಬಾನ್ ಕಿ ಮೂನ್ ಆಗ್ರಹಿಸಿದ್ದಾರೆ.

ಕೇವಲ ದೇಶೀಯ ಆರ್ಥಿಕ ಸಮಸ್ಯೆಗಳನ್ನು ಚರ್ಚಿಸಲು ಮಾತ್ರ `ಜಿ-20~ ವೇದಿಕೆ ಆಗಬಾರದು. ಸದ್ಯದ ಪರಿಸ್ಥಿತಿಯಲ್ಲಿ ಪ್ರಪಂಚದಾದ್ಯಂತ ಜನರ ಹತಾಶೆ ವ್ಯಕ್ತವಾಗುತ್ತಿದೆ.

`ವಾಲ್‌ಸ್ಟ್ರೀಟ್ ಮುತ್ತಿಗೆ~ ಆಂದೋಲನದ ಮೂಲಕ ಜನರು ತಾವು ಏನನ್ನು ಬಯಸುತ್ತೇವೆ ಎನ್ನುವುದನ್ನು ಇಡೀ ಪ್ರಪಂಚಕ್ಕೆ ಸ್ಪಷ್ಟ ಮತ್ತು ಸಂದೇಹಕ್ಕೆ ಎಡೆಯಿಲ್ಲದ ಸಂದೇಶ ರವಾನಿಸಿದ್ದಾರೆ. ಈ ಹಿನ್ನೆಲೆಯಲ್ಲಿ `ಜಿ-20~ ನಾಯಕರು ಜಾಗತಿಕ ಆರ್ಥಿಕ ತಲ್ಲಣಗಳಿಗೆ ಸೂಕ್ತ ಪರಿಹಾರ ಕಂಡು ಹಿಡಿಯಬೇಕು ಎಂದು  ಅಭಿಪ್ರಾಯಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT