ಬೆಂಗಳೂರು: 2010ನೇ ಸಾಲಿನ ಪ್ರತಿಷ್ಠಿತ `ಪಂಪ ಪ್ರಶಸ್ತಿ~ ಖ್ಯಾತ ವಿಮರ್ಶಕ ಡಾ.ಜಿ.ಎಚ್. ನಾಯಕ ಅವರಿಗೆ ಸಂದಿದೆ. ರಂಗಭೂಮಿ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದವರಿಗೆ ನೀಡುವ 2011ನೇ ಸಾಲಿನ ಡಾ. ಗುಬ್ಬಿ ವೀರಣ್ಣ ಪ್ರಶಸ್ತಿಯು ವೃತ್ತಿ ಹಾಗೂ ಗ್ರಾಮೀಣ ರಂಗಭೂಮಿಯ ಹಿರಿಯ ನಾಟಕಕಾರ, ನಿರ್ದೇಶಕ ಎಲ್.ಬಿ.ಕೆ. ಅಲ್ದಾಳ ಅವರಿಗೆ ಸಂದಿದೆ ಎಂದು ಕನ್ನಡ ಮತ್ತು ಸಂಸ್ಕೃತಿಸಚಿವ ಗೋವಿಂದ ಕಾರಜೋಳ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಎರಡೂ ಪ್ರಶಸ್ತಿಗಳು ತಲಾ ಮೂರು ಲಕ್ಷ ರೂ. ನಗದು ಹಾಗೂ ಸ್ಮರಣಿಕೆಯನ್ನು ಒಳಗೊಂಡಿವೆ.