ಹಾಸನ ಕ್ಷೇತ್ರದ ಶಾಸಕರಾದ ಎಚ್. ಎಸ್.ಪ್ರಕಾಶ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಸುಲೋಚನಾ ರಾಮಕೃಷ್ಣ, ಸ್ವಾಮಿ ವಿವೇಕಾನಂದ ಯೂತ್ ಮೂವ್ಮೆಂಟ್ನ ಬೆಂಗಳೂರು ಕೇಂದ್ರದ ಮುಖ್ಯ ವ್ಯವಸ್ಥಾಪಕ ನರೇಶ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎ.ಟಿ.ಚಾಮರಾಜ್, ಕ್ಷೇತ್ರ ಶಿಕ್ಷಣಾಧಿಕಾರಿ ಪುಟ್ಟರಾಜು, ಸ್ವಾಮಿ ವಿವೇಕಾನಂದ ಯೂತ್ ಮೂವ್ಮೆಂಟ್ನ ಮುರಳಿ, ತನುಜಾ, ಚಂದ್ರೇಗೌಡ, ಜಯರಾಮು, ಕುಮಾರ್, ಶಣ್ಮುಖ, ಮಹೇಂದ್ರ, ಮತ್ತಿತರರು ಇದ್ದರು.
ಸದಸ್ಯದಲ್ಲೇ ನಿವೃತ್ತರಾಗಲಿರುವ ಶಿಕ್ಷಣ ಸಂಯೋಜಕ ಚಂದ್ರಯ್ಯಶೆಟ್ಟಿಯವರನ್ನು ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷರು ಸನ್ಮಾನಿಸಿದರು.ದೊಡ್ಡಗದ್ದವಳ್ಳಿ ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಸಯ್ಯದ್ ಪಾಷಾ ಸ್ವಾಗತಿಸಿದರು. ಶಿಕ್ಷಕ ಶಶಿಧರ್ ಕಾರ್ಯಕ್ರಮ ನಿರೂಪಿಸಿದರು.