ಬಾಗಲಕೋಟೆ: ಜಿಲ್ಲಾಮಟ್ಟದ ದಸರಾ, ಗ್ರಾಮೀಣ ಮತ್ತು ಮಹಿಳಾ ಕ್ರೀಡಾಕೂಟ ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ಆರಂಭವಾಯಿತು.
ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಕವಿತಾ ಪಿ. ದಡ್ಡೇನವರ ಧ್ವಜಾರೋಹಣ ನೆರವೇರಿಸುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕ್ರೀಡಾಪಟುಗಳು ತಮ್ಮ ಕ್ರೀಡಾ ಸಾಮಾರ್ಥ್ಯವನ್ನು ಪ್ರದರ್ಶಿಸುವ ಮೂಲಕ ರಾಜ್ಯಮಟ್ಟದಲ್ಲಿ ಜಿಲ್ಲೆಗೆ ಹೆಸರು ತರಬೇಕು ಎಂದು ಹೇಳಿದರು.
ನಗರಸಭೆ ಅಧ್ಯಕ್ಷೆ ಜ್ಯೋತಿ ಭಜಂತ್ರಿ ಕ್ರೀಡಾಕೂಟದ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಸೈಕ್ಲಿಂಗ್ ತರಬೇತುದಾರರಾದ ಅನಿತಾ ನಿಂಬರಗಿ, ವಾಣಿಜ್ಯ ತೆರಿಗೆ ಅಧಿಕಾರಿ ಅಪ್ಪು ಚಿಮ್ಮಲಗಿ ಕಾರ್ಯಕ್ರಮದಲ್ಲಿ ಇದ್ದರು. ಬಳಿಕ ನಡೆದ ಕ್ರೀಡಾಕೂಟದಲ್ಲಿ ಜಿಲ್ಲೆಯ ವಿವಿಧೆಡೆಯಿಂದ ಆಗಮಿಸಿದ್ದ ಕ್ರೀಡಾಪಟುಗಳು ಸ್ಪರ್ಧೆಯಲ್ಲಿ ಪಾಲ್ಗೊಂಡರು. ಕ್ರೀಡಾಪಟುಗಳಿಗೆ ಮಧ್ಯಾಹ್ನದ ಊಟಕ್ಕೆ ವ್ಯವಸ್ಥೆ ಮಾಡದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು.