ವಂಚನೆ ಪ್ರಕರಣವೊಂದರಲ್ಲಿ ಹರೀಶ್ಗೌಡ ಅವರಿಗೆ ಸಾಗರದ ಹೆಚ್ಚುವರಿ ಜೆಎಂಎಫ್ ನ್ಯಾಯಾಲಯ ಶಿಕ್ಷೆ ವಿಧಿಸಿದ ಕಾರಣಕ್ಕೆ ಜಿಲ್ಲಾಧಿಕಾರಿ, ಅವರನ್ನು ಸದಸ್ಯತ್ವ ಹಾಗೂ ಅಧ್ಯಕ್ಷ ಸ್ಥಾನದಿಂದ ವಜಾ ಮಾಡಿದ್ದರು. ಈ ಆದೇಶವನ್ನು ಪೌರಾಡಳಿತ ನಿರ್ದೇಶಕರು ಕೂಡ ಎತ್ತಿ ಹಿಡಿದಿದ್ದರು. ಇದನ್ನು ಹರೀಶ್ ಗೌಡ ಅವರು ಹೈಕೋರ್ಟ್ನಲ್ಲಿ ಪ್ರಶ್ನಿಸಿದ್ದರು. ಆದೇಶ ಹೊರಡಿಸುವ ಸಂದರ್ಭದಲ್ಲಿ ಕಾನೂನಿನ ನಿಯಮಗಳ ಪ್ರಕಾರ ಅನುಸರಿಸಬೇಕಾದ ಪ್ರಕ್ರಿಯೆಗಳನ್ನು ನಡೆಸದೆ ಇರುವ ಕಾರಣಕ್ಕೆ ಹೈಕೋರ್ಟ್ ಜಿಲ್ಲಾಧಿಕಾರಿ ಆದೇಶವನ್ನು ರದ್ದುಗೊಳಿಸಿದೆ.