ಶಿವಗಂಗಾ, ತಮಿಳುನಾಡು (ಪಿಟಿಐ): ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ಪರಾಮರ್ಶಿಸಲು ಕೇಂದ್ರ ಗೃಹಸಚಿವ ಪಿ. ಚಿದಂಬರಂ ಅವರು ಕರೆದಿದ್ದ ಸಭೆಗೆ ಶಿವಗಂಗಾ ಮತ್ತು ಪುದುಕೊಟ್ಟಾಯ್ ಜಿಲ್ಲೆಯ ಜಿಲ್ಲಾಧಿಕಾರಿಗಳು ಗೈರು ಹಾಜರಾದ ಕಾರಣ ಸಭೆಯನ್ನು ರದ್ದುಪಡಿಸಲಾಯಿತು.
ಸೋಮವಾರ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ಜಾಗೃತಿ ಮತ್ತು ವಿಚಕ್ಷಣಾ ಸಮಿತಿ ಸಭೆಗೆ ಈ ಇಬ್ಬರು ಜಿಲ್ಲಾಧಿಕಾರಿಗಳು ಬರದಿರುವ ಹಿನ್ನೆಲೆಯಲ್ಲಿ ಸಭೆ ರದ್ದುಪಡಿಸಲಾಯಿತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.