ಹೀಗಾಗಿ ರೈತರು ಸರ್ಕಾರ ನಿಗದಿಪಡಿಸುವ ದರಕ್ಕೆ ಜಮೀನು ನೀಡಲು ಹಿಂದೇಟು ಹಾಕುತ್ತಿದ್ದಾರೆ. ಇದರಿಂದಾಗಿ ಅಭಿವೃದ್ಧಿ ಕಾರ್ಯಗಳಿಗೆ ಜಮೀನಿನ ಕೊರತೆ ತೀವ್ರವಾಗಿದೆ ಎಂದು ವಿಷಾಧ ವ್ಯಕ್ತಪಡಿಸಿದರು.
ಜಿಲ್ಲೆಯ ಶೇ.92 ರಷ್ಟು ರಸ್ತೆಗಳು ವ್ಯವಸ್ಥಿತ ರೀತಿಯಲ್ಲಿ ನಿರ್ಮಾಣಗೊಂಡಿವೆ. ಇನ್ನೂ ಶೇ.8 ರಷ್ಟು ರಸ್ತೆಗಳು ನಿರ್ಮಾಣವಾಗಬೇಕಿದೆ ಎಂದರು. ಗದಗ- ಗಜೇಂದ್ರಗಡ-ಇಲಕಲ್ ರಸ್ತೆ ನಿರ್ಮಾಣಕ್ಕೆ 200 ಕೋಟಿ ಅನುದಾನ ಬಿಡುಗಡೆಯಾಗಿದ್ದು, ಕೆಲವೇ ದಿನಗಳಲ್ಲಿ ಕಾಮಗಾರಿ ಆರಂಭಗೊಳ್ಳಲಿದೆ ಎಂದರು.
ಜಿ.ಪಂ. ಉಪಾಧ್ಯಕ್ಷ ರಮೇಶ ಮುಂದಿನಮನಿ, ತಾ.ಪಂ ಅಧ್ಯಕ್ಷೆ ಲಲಿತಾ ಪೂಜಾರ, ಗ್ರಾ.ಪಂ ಅಧ್ಯಕ್ಷೆ ಗೀತಾಬಾಯಿ ಕುಲಕರ್ಣಿ, ಚಂದಪ್ಪ ಗುಡದೂರ, ಬಸವರಾಜ ಅಂಗಡಿ, ರಾಚನಗೌಡ ಗೌಡರ, ಜಿ.ಪಂ ಸಹಾಯಕ ಎಂಜಿನಿಯರ್ ವಿ.ಕೆ.ಕಾಳಪ್ಪನವರ, ಕಿರಿಯ ಎಂಜಿನಿಯರ್ ಎಸ್. ಎಂ.ದ್ಯಾಮಣ್ಣವರ ಉಪಸ್ಥಿತರಿದ್ದರು.