ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಲ್ಲೆಯಲ್ಲಿ 62.9 ಮಿ.ಮೀ. ಮಳೆ

Last Updated 1 ಜೂನ್ 2013, 12:20 IST
ಅಕ್ಷರ ಗಾತ್ರ

ಮಂಡ್ಯ: ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಹದವಾದ ಮಳೆ ಸುರಿದಿದ್ದು, ಕೃಷಿ ಚಟುವಟಿಕೆ ಕಾರ್ಯ ಚುರುಕುಕೊಂಡಿದೆ.

ಈಗಾಗಲೇ ಬಿತ್ತನೆ ಮಾಡಲಾಗಿದ್ದ ಉದ್ದು, ಹೆಸರು, ಅಲಸಂದೆ ಮುಂತಾದ ಧಾನ್ಯದ ಬೆಳೆಗಳಿಗೆ ಅನುಕೂಲವಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಉಂಟಾಗಿದ್ದ ಕುಡಿಯುವ ನೀರಿಗೂ ಕೆಲವು ಕಡೆಗಳಲ್ಲಿ ಒಂದಷ್ಟು ಪರಿಹಾರ ದೊರೆತಿದೆ.

ಜಿಲ್ಲೆಯಲ್ಲಿ ಮದ್ದೂರು ಹೊರತುಪಡಿಸಿ ಜಿಲ್ಲೆಯ ವಿವಿಧೆಡೆ ಶುಕ್ರವಾರ ಒಟ್ಟು 62.9 ಮಿ.ಮೀ. ಮಳೆಯಾಗಿದೆ. ಮಂಡ್ಯದಲ್ಲಿ 18.8 ಮಿ.ಮೀ., ಪಾಂಡವಪುರ- 11.3 ಮಿ.ಮೀ., ಮಳವಳ್ಳಿ- 7 ಮಿ.ಮೀ., ನಾಗಮಂಗಲ- 13.8 ಮಿ.ಮೀ., ಕೃಷ್ಣರಾಜಪೇಟೆ- 6.8 ಮಿ.ಮೀ., ಶ್ರೀರಂಗಪಟ್ಟಣ- 5.2 ಮಿ.ಮೀ. ಮಳೆ ಸುರಿದಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರದ ಮಾಹಿತಿ ತಿಳಿಸಿದೆ. ಶನಿವಾರ ಸಂಜೆ ಮಂಡ್ಯ ನಗರದಲ್ಲಿ ತುಂತುರು ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT