ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಲ್ಲೆಯಲ್ಲಿನ ಗಣಿ ಪ್ರದೇಶದ ಸಮೀಕ್ಷೆ

Last Updated 9 ಸೆಪ್ಟೆಂಬರ್ 2011, 10:45 IST
ಅಕ್ಷರ ಗಾತ್ರ

ಚಿತ್ರದುರ್ಗ: ಜಿಲ್ಲೆಯಲ್ಲಿನ ಗಣಿ ಪ್ರದೇಶದ ಸಮೀಕ್ಷೆ ಕಾರ್ಯಕ್ಕೆ ಚಾಲನೆ ನೀಡಲಾಗಿದೆ.

ಜಿಲ್ಲೆಯಲ್ಲಿನ ಹೊಳಲ್ಕೆರೆ, ಹೊಸದುರ್ಗ ಮತ್ತು ಚಿತ್ರದುರ್ಗ ತಾಲ್ಲೂಕುಗಳಲ್ಲಿನ ಗಣಿ ಪ್ರದೇಶಗಳಲ್ಲಿ ಸಮೀಕ್ಷೆ ಕಾರ್ಯವನ್ನು ಐದು ತಂಡಗಳು ಕೈಗೊಂಡಿವೆ.

ಕಳೆದ ಎರಡು ದಿನಗಳಿಂದ ಈ ಸಮೀಕ್ಷೆ ಕಾರ್ಯ ಆರಂಭವಾಗಿದೆ. ಸುರತ್ಕಲ್‌ನ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಸಂಸ್ಥೆಯ ತಂಡ ಮತ್ತು ಕಂದಾಯ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಯ ತಂಡ ಈ ಕಾರ್ಯದಲ್ಲಿ ತೊಡಗಿದೆ.

ಬುಧವಾರ ಮತ್ತು ಗುರುವಾರ ಭೀಮಸಮುದ್ರ ಸುತ್ತಮುತ್ತ ಇರುವ ಸೆಸಾಗೋವಾ, ಬಿಬಿಎಚ್, ಜಾನ್, ನರಹರಿ ಮೈನ್ಸ್‌ಗಳ ಸಮೀಕ್ಷೆ ಕಾರ್ಯ ನಡೆಯಿತು.

ಮುಖ್ಯವಾಗಿ ಈ ತಂಡಗಳು ಗಣಿಗಾರಿಕೆ ಪ್ರದೇಶದ ಗಡಿ ಗುರುತಿಸುವ ಕಾರ್ಯ ಮಾಡಲಿವೆ. ನಂತರ ಈ ಬಗ್ಗೆ ವರದಿಯನ್ನು ಸಿಇಸಿ ತಂಡಕ್ಕೆ ನೀಡಲಾಗುವುದು ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT