ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿ–20 ಸಭೆಯ ನಿರ್ಣಯ ಅನುಷ್ಠಾನ: ಭಾರತ ಒತ್ತಾಯ

Last Updated 18 ಸೆಪ್ಟೆಂಬರ್ 2013, 19:59 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಜಿ– 20 ಸಂಘ­ಟನೆಯ ವಿಶ್ವಾಸಾರ್ಹತೆ ಉಳಿಯ­ಬೇಕಾದರೆ ಆ ಸಭೆಯಲ್ಲಿ ತೆಗೆದು­ಕೊಂಡ ನಿರ್ಣಯಗಳನ್ನು ಬೇಗನೇ ಅನುಷ್ಠಾನಗೊಳಿಸಬೇಕು ಎಂದು ಭಾರತ ಒತ್ತಾಯಿಸಿದೆ.

ಇದೇ ವೇಳೆ, ಅಂತರರಾಷ್ಟ್ರೀಯ ಹಣ­ಕಾಸು ಸಂಸ್ಥೆಯ (ಐಎಂಎಫ್‌) ಮೀಸಲು ಸುಧಾರಣೆ ಜಾರಿ­ಗೊಳಿಸಲು ಅಭಿವೃದ್ಧಿ ಹೊಂದಿದ ರಾಷ್ಟ್ರಗಳು ತೋರುತ್ತಿರುವ ನಿರಾಸಕ್ತಿ ಬಗ್ಗೆಯೂ ಭಾರತ ಕಳವಳ ವ್ಯಕ್ತಪಡಿಸಿದೆ.

ಐಎಂಎಫ್‌ ಆಡಳಿತ ತತ್ವಗಳನ್ನು ಮತ್ತು ಬಂಡವಾಳ ಸುಧಾರಣಾ ಕ್ರಮಗಳನ್ನು ಅಳವಡಿಸಿಕೊಳ್ಳಲು ಅಭಿವೃದ್ಧಿ ಹೊಂದಿದ ರಾಷ್ಟ್ರಗಳು ಹಿಂದೇಟು ಹಾಕುತ್ತಿರುವುದು ಸ್ಪಷ್ಟ. ಈ ಧೋರಣೆಯಿಂದಾಗಿ ಜಿ–20 ಸಂಘಟ­ನೆಯ ವಿಶ್ವಾಸಾರ್ಹತೆಗೆ ಕುಂದುಂಟಾ­ಗಿದೆ ಎಂದು ಕೇಂದ್ರ ಹಣಕಾಸು ಸಚಿವ ಪಿ.ಚಿದಂಬರಂ ಇಲ್ಲಿನ ನಡೆದ ಕಾರ್ಯಕ್ರಮವೊಂದರಲ್ಲಿ ಹೇಳಿದ್ದಾರೆ.

ಜಾಗತೀಕರಣದ ಸಂದರ್ಭದಲ್ಲಿ ಜಿ– 20 ಸಂಘಟನೆಯ ಪಾತ್ರ ಅರ್ಥಪೂಣವಾಗಬೇಕೆಂದರೆ, ಅದು ಸ್ಪಷ್ಟ ಹಾಗೂ ಖಚಿತವಾದ ಕಾರ್ಯ­ಸೂಚಿ ಹೊಂದಿರಬೇಕು. ಸಂಘಟನೆ­ಯು ವಿಶೇಷವಾಗಿ ಆರ್ಥಿಕ ಮತ್ತು ಹಣಕಾಸು ವಿಷಯಗಳಿಗೆ ಸಂಬಂಧಿಸಿದ ವಿಷಯಗಳನ್ನೇ ಕೇಂದ್ರೀಕರಿಸಿ ಗಣ­ನೀಯ ಕೊಡುಗೆ ನೀಡಬೇಕು ಎಂದು ಸಚಿವರು ಅಭಿಪ್ರಾಯಪಟ್ಟರು.

ಡಿಸೆಂಬರ್‌ನಲ್ಲಿ ಇಂಡೊನೇಷ್ಯಾದ ಬಾಲಿಯಲ್ಲಿ ವಿಶ್ವ ವಾಣಿಜ್ಯ ಸಂಘ­ಟನೆಯ (ಡಬ್ಲುಟಿಒ) ಸಭೆ ನಡೆ ಯಲಿರುವ ಹಿನ್ನೆಲೆಯಲ್ಲಿ, ಡಬ್ಲುಟಿಒ ಸದಸ್ಯ ರಾಷ್ಟ್ರಗಳು ಜಿಗಟು ಧೋರಣೆ ತೊರೆಯುವಂತೆ ಸಲಹೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT