ಚನ್ನಗಿರಿ: ದೇವಸ್ಥಾನ, ಗುಡಿ ಗುಂಡಾರಗಳು ಪ್ರಾಚೀನ ಕಾಲದಿಂದಲೂ ಇವೆ. ಜನರಲ್ಲಿ ದೇವರ ಬಗ್ಗೆ ನಂಬಿಕೆ ಹೆಚ್ಚಿದೆ. ದೇವಸ್ಥಾನಗಳು ಶಾಂತಿ, ನೆಮ್ಮದಿಯ ಕೇಂದ್ರಗಳಾಗಬೇಕು. ಹಾಗೆಯೇ, ಜೀವನದಲ್ಲಿ ವಿಪತ್ತು ಎದುರಿಸುವ ಶಕ್ತಿ ಬೆಳೆಸಿಕೊಳ್ಳಬೇಕು ಎಂದು ಸಿರಿಗೆರೆ ತರಳಬಾಳು ಮಠದ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ತಾಲ್ಲೂಕಿನ ಗುಳ್ಳೇಹಳ್ಳಿ ಗ್ರಾಮದಲ್ಲಿ ಭಾನುವಾರ ನಡೆದ ಈಶ್ವರ ದೇವಸ್ಥಾನ ಜೀರ್ಣೊದ್ಧಾರ ಹಾಗೂ ಕಳಸಾರೋಹಣ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಶರೀರ ಎಂಬುದು ಭೂತ ಬಂಗಲೆಯಾಗಬಾರದು. ಸದ್ಗುಣಗಳನ್ನು ಜೀವನದಲ್ಲಿ ಬೆಳೆಸಿಕೊಳ್ಳಬೇಕು. ಆಧ್ಯಾತ್ಮಿಕ ಚಿಂತನೆ, ಆತ್ಮ ಸಾಕ್ಷಾತ್ಕಾರ, ದೃಢವಾದ ನಂಬಿಕೆ ಹೊಂದುವುದು ಅಗತ್ಯವಾಗಿದೆ.