ಕುಲಪತಿ ಸುರೇಶ್ ಮಾತನಾಡಿ, ದೇಶದಲ್ಲಿ ಜನಸಂಖ್ಯೆ ಹೆಚ್ಚಾಗುತ್ತಿದೆ. ಗ್ರಾಮೀಣ ಪ್ರದೇಶದ ಜನರು ಚಿಕಿತ್ಸೆಗಾಗಿ ನಗರ ಪ್ರದೇಶಕ್ಕೆ ಬರಲು ಆಗುವುದಿಲ್ಲ. ಕಡಿಮೆ ಖರ್ಚಿನ ಉಪಕರಣಗಳನ್ನು ಕಂಡು ಹಿಡಿದು ಆರಂಭಿಕ ಹಂತದಲ್ಲಿಯೇ ರೋಗಗಳನ್ನು ಪತ್ತೆ ಮಾಡುವ ಕೆಲಸವಾಗಬೇಕು. ಈ ನಿಟ್ಟಿನಲ್ಲಿ ಹಲವು ಕ್ಲಿನಿಕಲ್ ಸಂಶೋಧನೆ ಕೈಗೊಳ್ಳಲು ಮಾತುಕತೆ ನಡೆಸಲಾಗಿದೆ. ಇದರಿಂದ ಅನಗತ್ಯವಾಗಿ ಹಣ ಖರ್ಚು ಮಾಡುವುದನ್ನು ತಪ್ಪಿಸಬಹುದು ಎಂದರು.