ರಾಯಚೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜಾತ್ಯತೀತ ಜನತಾ ದಳವು 224 ವಿಧಾನಸಭಾ ಕ್ಷೇತ್ರಕ್ಕೆ ತನ್ನ ಅಭ್ಯರ್ಥಿ ಕಣಕ್ಕಿಳಿಸಲಿದೆ. ಯಾವುದೇ ಪಕ್ಷದೊಂದಿಗೆ ಹೊಂದಾಣಿಕೆ ಇಲ್ಲ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಹೇಳಿದರು.
ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಬಿಜೆಪಿ ಸರ್ಕಾರವು ರೈತರ ಸಾಲ 3,600 ಕೋಟಿ ಮನ್ನಾ ಘೋಷಣೆ ಮಾಡಿದ್ದರೂ ಈವರೆಗೂ ಮನ್ನಾ ಮಾಡಿಲ್ಲ. ಕೇವಲ ಘೋಷಣೆ ಆಗಿದೆ. 2013ರವರೆಗೆ ಅವಧಿ ನಿಗದಿಪಡಿಸಿದ್ದಾರೆ. ಆ ಹೊತ್ತಿಗೆ ಈ ಸರ್ಕಾರ ಅಧಿಕಾರದಲ್ಲಿಯೇ ಇರುವುದಿಲ್ಲ. ಅವೈಜ್ಞಾನಿಕ ಘೋಷಣೆ ಮಾಡಿ ಸರ್ಕಾರ ಜನತೆ ಕಣ್ಣಿಗೆ ಮಣ್ಣೆರಚುತ್ತಿದೆ.