ಬೆಂಗಳೂರು: ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಸೋಮವಾರ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳ ನೂರಾರು ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಯಾದರು.
ಬಿಜೆಪಿ ಅಭ್ಯರ್ಥಿ ಉದಯ್ ಬಿ. ಗರುಡಾಚಾರ್ ಹೊಸ ಕಾರ್ಯಕರ್ತರನ್ನು ಪಕ್ಷಕ್ಕೆ ಸ್ವಾಗತಿಸಿ, `ಸ್ವಚ್ಛ ಆಡಳಿತ ನೀಡಿ ಈ ಭಾಗದ ಜನರಿಗೆ ಮೂಲಸೌಕರ್ಯ ಒದಗಿಸಲು ಆದ್ಯತೆ ನೀಡಲಾಗುವುದು. ಕಾರ್ಯಕರ್ತರು ಯಾವುದೇ ಪ್ರತಿಫಲ ಅಪೇಕ್ಷೆ ಇಲ್ಲದೆ ಪಕ್ಷವನ್ನು ಸೇರುತ್ತಿರುವುದು ಉತ್ತಮ ಬೆಳವಣಿಗೆ' ಎಂದು ಅವರು ಹೇಳಿದರು.