ಇದೇ ಸಂದರ್ಭದಲ್ಲಿ `ಭ್ರಷ್ಟಾಚಾರದ ವಿರುದ್ಧ ಸಾರ್ವಜನಿಕ ಪ್ರಕಟಣೆ' ಎಂಬ ಹೆಸರಿನಲ್ಲಿ ಹೊರಡಿಸಿದ್ದ ಕರಪತ್ರವನ್ನು ಹಿಡಿದು ಮಾಜಿ ಶಾಸಕ ಎಸ್.ಎಲ್.ಧರ್ಮೇಗೌಡ, ಎಸ್.ಎಲ್.ಭೋಜೇಗೌಡ ಸೇರಿದಂತೆ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಗೃಹಮಂಡಳಿ ಬಡಾವಣೆಯ ಮನೆ ಮತ್ತು ಅಂಗಡಿಗಳಿಗೆ ತೆರಳಿ ವಿತರಿಸಿದರು. ಪಕ್ಷದ ಅಧ್ಯಕ್ಷ ಮಂಜಪ್ಪ, ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಜಿ.ಎಸ್.ಚಂದ್ರಪ್ಪ, ಜಿಲ್ಲಾ ಮಹಿಳಾ ವಿಭಾಗದ ಅಧ್ಯಕ್ಷೆ ಜ್ಯೋತಿ ಈಶ್ವರ್, ನಗರಸಭಾ ಸದಸ್ಯ ದೇವೀ ಪ್ರಸಾದ್, ಜಯರಾಜ್ ಭಾಗವಹಿಸಿದ್ದರು.