ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೆಸ್ಸಿಕಾ ಪ್ರಕರಣ: ನಟ ಮುನ್ಷಿಗೆ ಜಾಮೀನು

Last Updated 23 ಡಿಸೆಂಬರ್ 2013, 12:10 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ರೂಪದರ್ಶಿ ಜೆಸ್ಸಿಕಾ ಲಾಲ್ ಹತ್ಯೆ ಪ್ರಕರಣದಲ್ಲಿ ಸುಳ್ಳು ಹೇಳಿಕೆ ನೀಡಿದ ಆರೋಪ ಎದುರಿಸುತ್ತಿರುವ ಬಾಲಿವುಡ್ ನಟ ಶಯನ್ ಮುನ್ಷಿ ಅವರಿಗೆ ದೆಹಲಿ ಹೈಕೋರ್ಟ್ ಸೋಮವಾರ ಜಾಮೀನು ನೀಡಿದೆ.

ಮುನ್ಷಿ ಅವರಿಗೆ ಷರತ್ತು ಬದ್ಧ ಜಾಮೀನು ನೀಡಲಾಗಿದೆ. 50 ಸಾವಿರ ರೂಪಾಯಿ ಮೌಲ್ಯದ ಬಾಂಡ್ ಮತ್ತು ಒಬ್ಬರ  ಖಾತರಿ ಪಡೆದಿದೆ. ಅಲ್ಲದೆ ವಿಚಾರಣೆ ವೇಳೆ ಹಾಜರಿರುವಂತೆ, ಸಾಕ್ಷಿ ನಾಶಪಡಿಸದಂತೆ ತಿಳಿಸಿದ್ದು,  ಕೋರ್ಟ್ ಗಮನಕ್ಕೆ ತರದೆ ದೇಶ ಬಿಡದಂತೆ ಷರತ್ತು ವಿಧಿಸಿದೆ.

ಪ್ರಕರಣ ಸಂಬಂಧ ತಮ್ಮ ವಿರುದ್ಧ ಸಮನ್ಸ್ ಜಾರಿಗೊಂಡ ಹಿನ್ನಲೆಯಲ್ಲಿ ನ್ಯಾಯಾಲಯದ ಎದುರು ಹಾಜರಾಗಿ, ಜಾಮೀನು ನೀಡುವಂತೆ ಮನವಿ ಸಲ್ಲಿಸಿದ್ದರು. ಮುನ್ಷಿ ಅವರ ಮೇಲಿರುವುದು ಜಾಮೀನು ನೀಡಬಹುದಾದ ಆರೋಪ ಎಂಬ ನೆಲೆಯಲ್ಲಿ ಮೆಟ್ರೋಪಾಲಿಟಿನ್ ನ್ಯಾಯಾಧೀಶ ವಿದ್ಯಾ ಪ್ರಕಾಶ್ ಅವರು ಜಾಮೀನು ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT