ಅಮೃತಸರ (ಪಿಟಿಐ): ಇಲ್ಲಿನ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಅರುಣ್ ಜೇಟ್ಲಿ ಅವರು ಮನೆ ಖರೀದಿಸಿರುವುದು ವಿವಾದ ಸೃಷ್ಟಿಸಿದ್ದು, ಅವರ ಪ್ರತಿಸ್ಪರ್ಧಿ ಕಾಂಗ್ರೆಸ್ನ ಅಮರಿಂದರ್ ಸಿಂಗ್ ಅವರು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.
‘ಚುನಾವಣಾ ಪ್ರಚಾರದ ಭಾಗವಾಗಿ ಜೇಟ್ಲಿ ಅಮೃತಸರದಲ್ಲಿ ಮನೆ ಖರೀದಿಸಿದ್ದಾರೆ’ ಎಂದು ಅಮರಿಂದರ್ ಸಿಂಗ್ ದೂರಿನಲ್ಲಿ ಆರೋಪಿಸಿದ್ದಾರೆ.
ಜನರು ಜೇಟ್ಲಿ ಅವರನ್ನು ‘ಹೊರಗಿನವರು’ ಎಂದು ಪರಿಗಣಿಸುವ ಸಾಧ್ಯತೆ ಇರುವುದರಿಂದ ಅವರು ಕಳೆದ ವಾರ ಅಮೃತಸರದಲ್ಲಿ ಮನೆ ಖರೀದಿಸಿದ್ದಾರೆ ಎಂದು ಸಿಂಗ್ ದೂರಿದ್ದಾರೆ. ಬಿಜೆಪಿ ಹಿರಿಯ ಮುಖಂಡರಾಗಿರುವ ಅರುಣ್ ಜೇಟ್ಲಿ ಅವರು ಇದೇ ಮೊದಲ ಬಾರಿಗೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ