ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೇನು ಅಧ್ಯಯನ ಕೇಂದ್ರ ನಿಷ್ಕ್ರಿಯ

Last Updated 16 ಡಿಸೆಂಬರ್ 2012, 19:57 IST
ಅಕ್ಷರ ಗಾತ್ರ

ಬೆಂಗಳೂರು: ಅಗತ್ಯ ಮೂಲಸೌಕರ್ಯ ಒದಗಿಸಿದ ಹೊರತಾಗಿಯೂ ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಕ್ಯಾಂಪಸ್‌ನಲ್ಲಿರುವ ಜೇನುಕೃಷಿ ಅಧ್ಯಯನ ಕೇಂದ್ರ ನಿಷ್ಕ್ರಿಯವಾಗಿದೆ.

ಈ ಕೇಂದ್ರವನ್ನು 2007ರಲ್ಲಿ ಆರಂಭಿಸಲಾಯಿತು. ಜೇನುಕೃಷಿಯಲ್ಲಿ ಡಿಪ್ಲೊಮಾ ನೀಡುವುದು ಹಾಗೂ ಸಂಶೋಧನೆ ನಡೆಸುವುದು ಈ ಕೇಂದ್ರದ ಆರಂಭದ ಹಿಂದಿನ ಉದ್ದೇಶವಾಗಿತ್ತು. ಆದರೆ, ಆರಂಭವಾದ ದಿನದಿಂದಲೇ ಈ ಕೇಂದ್ರ ಕಾರ್ಯನಿರ್ವಹಿಸುತ್ತಿಲ್ಲ ಎಂಬ ಆರೋಪ ವ್ಯಕ್ತವಾಗಿದೆ.

ಕೇಂದ್ರದ ದ್ವಾರಕ್ಕೆ ಬೀಗ ಹಾಕಲಾಗಿದೆ. ಆವರಣದಲ್ಲಿ ಜಾನುವಾರುಗಳ ಸೆಗಣಿ ರಾಶಿ ಬಿದ್ದಿದೆ. ಈ ಕೇಂದ್ರದ ಬಗ್ಗೆ ಮಾಹಿತಿ ನೀಡಲು ವಿಭಾಗದಲ್ಲಿ ಯಾರೂ ಲಭ್ಯರು ಇಲ್ಲದಂತಹ ಪರಿಸ್ಥಿತಿ ಇದೆ. `ಈ ಕೇಂದ್ರದಲ್ಲಿ ಯಾವುದೇ ಚಟುವಟಿಕೆ ಅಥವಾ ಪಾಠ ನಡೆಯುವುದನ್ನು ನಾವು ಈ ವರೆಗೆ ನೋಡಿಲ್ಲ. ದ್ವಾರಕ್ಕೆ ಬಾಗಿಲು ಹಾಕುವ ಮೂಲಕ ಈ ವಿಭಾಗ ಕಾರ್ಯನಿರ್ವಹಿಸುತ್ತಿದೆ ಎಂಬ ಭಾವನೆ ಮೂಡುವಂತೆ ಮಾಡಲಾಗುತ್ತಿದೆ. ಆದರೆ, ವಾಸ್ತವ ಸ್ಥಿತಿ ಭಿನ್ನವಾಗಿದೆ' ಎಂದು ಸ್ಥಳೀಯರು ದೂರಿದ್ದಾರೆ.

`ಈ ಕೇಂದ್ರ ಸಮರ್ಪಕವಾಗಿ ಕಾರ್ಯನಿರ್ವಹಿಸುವಂತೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು' ಎಂದು ಹಂಗಾಮಿ ಕುಲಪತಿ ಡಾ.ಎನ್.ರಂಗಸ್ವಾಮಿ ಭರವಸೆ ನೀಡಿದರು. ಆದರೆ, ವಿಭಾಗದ ಮುಖ್ಯಸ್ಥ ಎಂ.ಎಸ್.ರೆಡ್ಡಿ ಪ್ರತಿಕ್ರಿಯೆ ನೀಡಲು ಲಭ್ಯರಾಗಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT