ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೈಲು ಭೇಟಿ ಅಂತ್ಯ

Last Updated 27 ಜನವರಿ 2012, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಕಾರಾಗೃಹಕ್ಕೆ ಸಂಬಂಧಿಸಿದ ಭಾರತ- ಪಾಕಿಸ್ತಾನದ ನ್ಯಾಯಾಂಗ ಸಮಿತಿಯು ಪಾಕ್ ಕೈದಿಗಳನ್ನು ಇರಿಸಿರುವ ದೇಶದ ವಿವಿಧ ಜೈಲುಗಳಿಗೆ ನೀಡಿದ್ದ ಐದು ದಿನಗಳ ಭೇಟಿ ಶುಕ್ರವಾರ ಕೊನೆಗೊಂಡಿತು.

ನಾಲ್ವರು ನಿವೃತ್ತ ನ್ಯಾಯಾಧೀಶರನ್ನು ಒಳಗೊಂಡಿರುವ ಸಮಿತಿಯು ಜನವರಿ 23ರಿಂದ ತಿಹಾರ್ ಜೈಲು,  ಜೈಪುರ ಹಾಗೂ ಅಮೃತಸರದ ಕೇಂದ್ರ ಕಾರಾಗೃಹಗಳಿಗೆ ತೆರಳಿ ಅಲ್ಲಿನ ಸ್ಥಿತಿಗತಿ ಮತ್ತು ಕೈದಿಗಳ ಪರಿಸ್ಥಿತಿಯನ್ನು ಅವಲೋಕಿಸಿತು.

ಮಹಿಳೆಯರು, ಬಾಲಾಪರಾಧಿಗಳು, ವಯೋವೃದ್ಧರು ಮತ್ತು ಮಾನಸಿಕ ಅಸ್ವಸ್ಥ ಕೈದಿಗಳಲ್ಲಿ ಹಲವರು ಅನಾರೋಗ್ಯ ಪೀಡಿತರಾಗಿದ್ದರೆ, ಇನ್ನು  ಕೆಲವರು ಅಂಗವೈಕಲ್ಯಕ್ಕೆ ಒಳಗಾಗಿದ್ದಾರೆ, ಮಾನವೀಯ ದೃಷ್ಟಿಯಿಂದ ಅವರಿಗೆ ಸೂಕ್ತ ಸೌಲಭ್ಯ ಕಲ್ಪಿಸಬೇಕು. ತೀವ್ರ ಅನಾರೋಗ್ಯ ಮತ್ತು ಮಾನಸಿಕ ಅಸ್ವಸ್ಥರಾಗಿ ಬಳಲುತ್ತಿರುವ ಕೈದಿಗಳನ್ನು ಕೂಡಲೇ  ಆಸ್ಪತ್ರೆಗೆ ದಾಖಲಿಸಬೇಕು ಎಂದು ಸಮಿತಿ ಸೂಚಿಸಿತು.


 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT