ಬೆಂಗಳೂರು: `ಜೈವಿಕ ಇಂಧನ ಬೆಳೆಯನ್ನು ಬೆಳೆದ ರೈತನಿಗೆ ಮುಂದಿನ ದಿನಗಳಲ್ಲಿ ಉತ್ತಮ ಬೆಲೆಸಿಗಲಿದೆ~ ಎಂದು ಗಾಂಧಿ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಕುಲಪತಿ ಡಾ.ಕೆ.ನಾರಾಯಣಗೌಡ ಹೇಳಿದರು.
ಕರ್ನಾಟಕ ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯು ಭಾನುವಾರ ಚಿತ್ರಕಲಾ ಪರಿಷತ್ನಲ್ಲಿ ಏರ್ಪಡಿಸಿದ್ದ ರೈತರ ಜತೆಗಿನ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
`ಜನರಲ್ಲಿ ಆಸಕ್ತಿ ಇದೆ~
|
`ರೈತರಿಗೆ ಉತ್ತಮ ಗುಣಮಟ್ಟದ ಸಸಿಗಳನ್ನು ಮಂಡಳಿ ಒದಗಿಸಿ, ಜೈವಿಕ ಇಂಧನ ಬೆಳೆಗಳನ್ನು ಪೂರ್ಣ ಪ್ರಮಾಣದಲ್ಲಿ ಬೆಳೆಯಲು ಸಾಧ್ಯವೆ ಎಂಬ ಬಗ್ಗೆ ಮಂಡಳಿ ಚಿಂತನೆ ಮಾಡಬೇಕು~ ಎಂದು ಅವರು ತಿಳಿಸಿದರು.
ಮಂಡಳಿಯ ಕಾರ್ಯಕಾರಿ ಅಧ್ಯಕ್ಷ ವೈ.ಬಿ.ರಾಮಕೃಷ್ಣ ಮಾತನಾಡಿ, `ಜೈವಿಕ ಇಂಧನ ಬೆಳೆಯನ್ನು ಉದ್ಯೋಗ ಖಾತರಿ ಯೋಜನೆಯ ಭಾಗವಾಗಿ ಉಪಯೋಗಿಸಿಕೊಳ್ಳಲು ಸರ್ಕಾರ ಒಪ್ಪಿಗೆ ನೀಡಿದೆ.
ಇದರಿಂದಾಗಿ ಪ್ರತಿ ಗ್ರಾಮ ಪಂಚಾಯಿತಿಗೆ ರೂ 50 ಲಕ್ಷ ದಿಂದ ಒಂದು ಕೋಟಿ ಅನುದಾನ ಸಿಗಲಿದೆ. ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಜೈವಿಕ ಇಂಧನ ಕಾರ್ಯಕ್ರಮವನ್ನು ಕಡ್ಡಾಯವಾಗಿ ಮಾಡಲು ಸೂಚಿಸಲಾಗುವುದು~ ಎಂದು ಅವರು ಹೇಳಿದರು.
ಸಮಾರಂಭದಲ್ಲಿ ಬಿಜಾಪುರ, ಶಿವಮೊಗ್ಗ, ಉತ್ತರ ಕನ್ನಡ, ಚಿಕ್ಕಬಳ್ಳಾಪುರ, ಧಾರವಾಡ ಮತ್ತಿತರ ಜಿಲ್ಲೆಗಳಿಂದ ರೈತರು ಆಗಮಿಸಿದ್ದರು. ಸಮಾರಂಭದಲ್ಲಿ ಕರ್ನಾಟಕ ರಾಜ್ಯ ಜೈವಿಕ ಇಂಧನ ಮಂಡಳಿ ವ್ಯವಸ್ಥಾಪಕ ನಿರ್ದೇಶಕ ಎ.ಕೆ.ಮೊನ್ನಪ್ಪ, ಮೈಸೂರು ಆಕಾಶವಾಣಿ (ಕೃಷಿ) ಪ್ರಸಾರ ನಿರ್ವಾಹಕ ಎನ್.ಕೇಶವಮೂರ್ತಿ, ಸಾವಯವ ಕೃಷಿ ಮಿಷನ್ ಅಧ್ಯಕ್ಷ ಡಾ.ಎ.ಎಸ್.ಆನಂದ್ ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.