ಪ್ರಕರಣದ ಹಿನ್ನೆಲೆ: ಅತ್ಯಾಚಾರ ಘಟನೆ ನಡೆದ ದಿನ (ಅ.13) ಆರೋಪಿಗಳು ಗಂಧದ ಮರ ಕಡಿದು ಸಾಗಿಸುವ ಉದ್ದೇಶಕ್ಕಾಗಿ ರಾತ್ರಿ 8.30ರ ಸುಮಾರಿಗೆ ಜ್ಞಾನಭಾರತಿ ಆವರಣಕ್ಕೆ ಬಂದಿದ್ದರು. ಅವರು ಗಂಧದ ಮರಗಳನ್ನು ಹುಡುಕುತ್ತಾ ಜ್ಞಾನಭಾರತಿ ಆವರಣದಲ್ಲಿ ಅಡ್ಡಾಡುತ್ತಿದ್ದಾಗ, ಯುವತಿ ಮತ್ತು ಆಕೆಯ ಸ್ನೇಹಿತ ಕಣ್ಣಿಗೆ ಬಿದ್ದಿದ್ದರು. ಈ ವೇಳೆ ಆರೋಪಿಗಳು ಯುವತಿಯ ಸ್ನೇಹಿತನ ಮೇಲೆ ಹಲ್ಲೆ ನಡೆಸಿ, ಬಳಿಕ ಆಕೆಯನ್ನು ಸ್ವಲ್ಪ ದೂರ ಎಳೆದೊಯ್ದು ಸಾಮೂಹಿಕವಾಗಿ ಅತ್ಯಾಚಾರ ನಡೆಸಿದ್ದರು.