ವಿಚಾರಣಾಧಿಕಾರಿಯ ಗೈರು ಹಾಜರಾತಿಯಿಂದಾಗಿ ವಿಚಾರಣೆ ಮುಂದೂಡಲಾಗಿದೆ ಎಂದು ತಿಳಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣಾಧಿಕಾರಿ ಹಾಗೂ ಸರ್ಕಾರಿ ವಕೀಲರು ಗೈರು ಹಾಜರಾಗಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ಗೌರವ್ ರಾವ್, ಈ ಸಂಬಂಧ ಲಿಖಿತ ವಿವರಣೆ ನೀಡುವಂತೆ ಸಂಬಂಧಿಸಿದ ಪೊಲೀಸ್ ಠಾಣೆ ವ್ಯಾಪ್ತಿಯ ಡಿಸಿಪಿ ಅವರಿಗೆ ಸೂಚನೆ ನೀಡಿದರು.