ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟಿಡಿಪಿ–ಬಿಜೆಪಿ ಮೈತ್ರಿ ಬಿಕ್ಕಟ್ಟು ಪರಿಹಾರ

Last Updated 18 ಏಪ್ರಿಲ್ 2014, 19:30 IST
ಅಕ್ಷರ ಗಾತ್ರ

ಹೈದರಾಬಾದ್‌ (ಪಿಟಿಐ): ಆಂಧ್ರ ಪ್ರದೇಶದಲ್ಲಿ ಟಿಡಿಪಿ ಮತ್ತು ಬಿಜೆಪಿ ನಡುವಣ ಮೈತ್ರಿಗೆ ಕುತ್ತಾಗಿ ಕಾಡಿದ್ದ ಬಿಕ್ಕಟ್ಟು ಕೊನೆಗೊಂಡಿದೆ. ಸೀಟು ಹಂಚಿಕೆ ಸೂತ್ರದ ಭಾಗವಾಗಿ ಬಿಜೆಪಿಗೆ ನೀಡಲಾಗಿದ್ದ 14 ವಿಧಾನಸಭಾ ಕ್ಷೇತ್ರಗಳಲ್ಲಿ ಇಚ್ಚಾಪುರ ಕ್ಷೇತ್ರವನ್ನು ಟಿಡಿಪಿಗೆ ಬಿಟ್ಟುಕೊಡಲು ಬಿಜೆಪಿ ಒಪ್ಪುವು­ದರೊಂದಿಗೆ ಬಿಕ್ಕಟ್ಟು ಪರಿಹಾರವಾಗಿದೆ.

ಬಿಜೆಪಿ ರಾಷ್ಟ್ರೀಯ ವಕ್ತಾರ ಪ್ರಕಾಶ್‌ ಜಾವಡೇಕರ್‌, ಆಂಧ್ರ­ಪ್ರದೇಶ ಬಿಜೆಪಿ ಘಟಕದ ಅಧ್ಯಕ್ಷ ಕಂಭಪತಿ ಹರಿಬಾಬು, ಟಿಡಿಪಿ ಸಂಸದ ವೈ. ಸತ್ಯನಾರಾಯಣ ಚೌಧರಿ ಮುಂತಾದವರು ಬಿಜೆಪಿಯ ಹಿರಿಯ ನಾಯಕ ವೆಂಕಯ್ಯ ನಾಯ್ಡು ಅವರ ನಿವಾಸದಲ್ಲಿ ಮಾತುಕತೆ ನಡೆಸಿ ಬಿಕ್ಕಟ್ಟು ಪರಿಹರಿಸಿಕೊಂಡರು.

 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT