ಹೊಸಕೋಟೆ: ಸಾಲದ ಹೊರೆ ತಾಳಲಾರದೆ ಸಾಫ್ಟ್ವೇರ್ ಎಂಜಿನಿಯರ್ ಸೇರಿದಂತೆ ಒಂದೇ ಕುಟುಂಬದ ಮೂರು ಮಂದಿ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತರನ್ನು ಕೆ.ಆರ್.ಪುರ ಸಮೀಪದ ದೇವಸಂದ್ರದ ನಿವಾಸಿಗಳಾದ ರವಿ (45), ಪತ್ನಿ ಕಲ್ಪನಾ (38), ಮಗ ಸುಕೇಶ್ (17)ಎಂದು ಗುರುತಿಸಲಾಗಿದೆ.
ಶುಕ್ರವಾರ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಸಮೀಪದ ಟೋಲ್ನಲ್ಲಿ ಟಾಟಾ ನ್ಯಾನೋ ಕಾರಿನ ನೋಂದಣಿ ಸಂಖ್ಯೆ ನಮೂದಾಗಿದೆ. ಕಾರನ್ನು ಗೊಟ್ಟಿಪುರ ಗೇಟ್ ಬಳಿ ನಿಲುಗಡೆ ಮಾಡಿ, ಕಾರಿನಲ್ಲಿಯೇ ವಿಷ ಸೇವಿಸಿ ಮೃತಪಟ್ಟಿದ್ದಾರೆ. ಬಹಳ ಸಮಯವಾದರೂ ಕಾರು ಚಲಿಸದ ಕಾರಣ ಸಂಶಯಗೊಂಡ ಗ್ರಾಮಸ್ಥರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಸ್ಥಳದಲ್ಲಿ ದೊರೆತ ಪತ್ರದಲ್ಲಿ ಸಾಲದ ಹೊರೆ ತಾಳಲಾರದೇ ವಿಷ ಸೇವಿಸಿ, ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿಸಲಾಗಿದೆ.
ಹೊಸಕೋಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದ್ದಾರೆ.
ಟ್ಯಾಂಕರ್ ಡಿಕ್ಕಿ: ಸಾಫ್ಟ್ವೇರ್ ಎಂಜಿನಿಯರ್ ಸಾವು