ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟೋಲ್ ಕೇಂದ್ರಗಳ ಮೇಲೆ ದಾಳಿ

Last Updated 12 ಜನವರಿ 2014, 12:54 IST
ಅಕ್ಷರ ಗಾತ್ರ

ಮುಂಬೈ (ಪಿಟಿಐ): ಮಹಾರಾಷ್ಟ್ರದ ಒಂಬತ್ತು ರಸ್ತೆಗಳಲ್ಲಿ ಟೋಲ್ (ರಸ್ತೆ ಸುಂಕ) ಸಂಗ್ರಹಿಸುವುದನ್ನು ವಿರೋಧಿಸಿ ಭಾನುವಾರ ಶಂಕಿತ ಶಿವಸೇನಾ ಕಾರ್ಯಕರ್ತರು ನಾಲ್ಕು ಟೋಲ್ ಬೂತ್‌ಗಳ ಮೇಲೆ ನಡೆಸಿದ ದಾಳಿಯು ಹಿಂಸಾಚಾರಕ್ಕೆ ತಿರುಗಿದ್ದು, ಶಾಂತಿ ಕಾಪಾಡುವಂತೆ ಮುಖ್ಯಮಂತ್ರಿ ಪೃಥ್ವಿರಾಜ್ ಚೌವ್ಹಾಣ್ ಅವರು ಪ್ರತಿಭಟನಾಕಾರರಿಗೆ ಮನವಿ ಮಾಡಿಕೊಂಡಿದ್ದಾರೆ.

`ಕೊಲ್ಲಾಪುರದಲ್ಲಿನ ಪರಿಸ್ಥಿತಿಯನ್ನು ನಾನು ಅವಲೋಕಿಸುತ್ತಿದ್ದೇನೆ, ಕಾನೂನು ಮತ್ತು ಸುವ್ಯವಸ್ಥೆ ಹದಗೆಡದಂತೆ ಪರಿಹಾರ ಮಾರ್ಗವೊಂದನ್ನು ಕಂಡುಹಿಡಿಯಲು ನಾವು ಪ್ರಯತ್ನಿಸುತ್ತಿದ್ದೇವೆ'ಎಂದು ಚೌವ್ಹಾಣ್ ಅವರು ಹೇಳಿದರು.

ಕೊಲ್ಲಾಪುರದಲ್ಲಿ ಟೋಲ್ ಬೂತ್‌ಗಳನ್ನು ಧ್ವಂಸಗೊಳಿಸಿದ ಆರೋಪದ ಮೇಲೆ ಹಲವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT