ಪಾವಗಡ: ಬಡ ವಿದ್ಯಾರ್ಥಿಗಳನ್ನು ಶೋಷಿಸುವ, ಶಾಲೆ ಕಾಲೇಜಿನಲ್ಲಿ ಸಮರ್ಪಕವಾಗಿ ಕರ್ತವ್ಯ ನಿರ್ವಹಿಸದೆ ಮನೆಪಾಠದ ಹೆಸರಿನಲ್ಲಿ ಹಣ ಸುಲಿಯುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ ಶಾಸಕ ಕೆ.ಎಂ.ತಿಮ್ಮರಾಯಪ್ಪ ತಿಳಿಸಿದ್ದಾರೆ.
ಸರ್ಕಾರಿ, ಅನುದಾನಿತ ಶಾಲಾ, ಕಾಲೇಜುಗಳ ಬೋಧಕರು ಮನೆ ಪಾಠ ನಡೆಸುವುದು ಕಂಡು ಬಂದರೆ ಅಮಾನತುಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಲಾಗಿದೆ. ಈ ಕುರಿತು ಶೀಘ್ರದಲ್ಲಿ ಪ್ರಾಂಶುಪಾಲರ, ಮುಖ್ಯ ಶಿಕ್ಷಕ ಹಾಗೂ ಸಂಬಂಧಿಸಿದ ಅಧಿಕಾರಿಗಳ ಸಭೆ ಕರೆಯಲಾಗುವುದು ಎಂದು ಹೇಳಿದ್ದಾರೆ.