ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟ್ರ್ಯಾಕ್ಟರ್ ಜಪ್ತಿ ವಿರುದ್ಧ ರೈತರ ಪ್ರತಿಭಟನೆ

Last Updated 25 ಜನವರಿ 2011, 19:30 IST
ಅಕ್ಷರ ಗಾತ್ರ

ಹಾಸನ: ಸಾಲ ಮರುಪಾವತಿಗೆ ವಿಳಂಬ ಮಾಡಿದ ರೈತರ ಮನೆಗೆ ಟ್ರ್ಯಾಕ್ಟರ್ ಖರೀದಿಗೆ ಸಾಲ ನೀಡಿದ ಬ್ಯಾಂಕ್‌ಗಳು ಗೂಂಡಾಗಳನ್ನು ಕಳುಹಿಸಿ ಬೆದರಿಸುತ್ತಿವೆ. ಇವರಿಂದ ನಮಗೆ ರಕ್ಷಣೆ ಒದಗಿಸಬೇಕು ಎಂದು ಆಗ್ರಹಿಸಿ ಹಾಸನ ಜಿಲ್ಲಾ ಟ್ರ್ಯಾಕ್ಟರ್ ಮಾಲೀಕರ ಸಂಘದವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಬೆಳೆ ನಷ್ಟ ಸಂಭವಿಸಿರುವುದರಿಂದ ಟ್ರ್ಯಾಕ್ಟರ್ ಖರೀದಿಸಿದ ರೈತರು ಸಾಲ ಮರುಪಾವತಿ ಮಾಡಲಾಗದೇ ಪರಿತಪಿಸುತ್ತಿದ್ದಾರೆ. ನಷ್ಟದ ಹೊರತಾಗಿಯೂ ಅವರು ಅಲ್ಪ-ಸ್ವಲ್ಪ ಸಾಲ ಮರುಪಾವತಿ ಮಾಡುತ್ತಿದ್ದಾರೆ. ಆದರೆ, ಬ್ಯಾಂಕ್‌ನವರು ಗೂಂಡಾ ಕಳುಹಿಸಿ ಟ್ರ್ಯಾಕ್ಟರ್‌ಗಳನ್ನು ವಶಪಡಿಸಿಕೊಳ್ಳಲು ಮುಂದಾಗಿದ್ದಾರೆ. ಇದರಿಂದ ರೈತರನ್ನು ಪಾರುಮಾಡಬೇಕು ಮತ್ತು ರೈತರಿಂದ ಜಪ್ತಿ ಮಾಡಿರುವ ಟ್ರ್ಯಾಕ್ಟರ್‌ಗಳನ್ನು ಮರಳಿಸಬೇಕು, ವಶಪಡಿಸಿಕೊಂಡಿರುವ ಟ್ರ್ಯಾಕ್ಟರ್‌ಗಳನ್ನು ಯಾವ ಕಾರಣಕ್ಕೂ ಹರಾಜು ಮಾಡಬಾರದು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಹೇಮಾವತಿ ಪ್ರತಿಮೆ ಬಳಿಯಿಂದ ಮೆರವಣಿಗೆ ಮೂಲಕ ಬಂದ ರೈತರು ಹೆಚ್ಚುವರಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಸಂಘದ ಅಧ್ಯಕ್ಷ ಮೈಲನಹಳ್ಳಿ ಮಂಜೇಗೌಡ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT