ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಠಿಕಾಣಿ ಹೂಡಿದ ಅಧಿಕಾರಿಗಳಿಗೆ ಗೇಟ್‌ಪಾಸ್

Last Updated 8 ಸೆಪ್ಟೆಂಬರ್ 2011, 10:45 IST
ಅಕ್ಷರ ಗಾತ್ರ

ಮಂಡ್ಯ: ಬೇರೆ ಸ್ಥಳಕ್ಕೆ ವರ್ಗಾವಣೆಗೊಂಡಿದ್ದರೂ, ಸರ್ಕಾರಿ ವಸತಿ ಸಮುಚ್ಛಯದಲ್ಲೇ ಠಿಕಾಣಿ ಹೂಡಿದ್ದ ಅಧಿಕಾರಿಗಳ ಕುಟುಂಬ ಸದಸ್ಯರನ್ನು ತಹಶೀಲ್ದಾರ್ ರಾಜೇಂದ್ರ ಪ್ರಸಾದ್ ಅವರು ನೇತೃತ್ವದಲ್ಲಿ ಬುಧವಾರ ತೆರವುಗೊಳಿಸಲಾಯಿತು.

ಮಂಡ್ಯ ಸುಭಾಷ್ ನಗರದ ಸರ್ಕಾರಿ ವಸತಿ ಗೃಹಗಳಲ್ಲಿ ನೆಲಸಿದ್ದ ಬೋರೇಗೌಡ, ರಮೆಶ್, ಆರ್.ಶಂಕರ್ ಹಾಗೂ ಸಿದ್ದೇಗೌಡ ಕುಟುಂಬದ ಸದಸ್ಯರನ್ನು ಎತ್ತಂಗಡಿ ಮಾಡಿಸಲಾಯಿತು. ಬೇರೆ ಸ್ಥಳಕ್ಕೆ ವರ್ಗಾವಣೆಯಾಗಿ 12 ವರ್ಷ ಕಳೆದಿದ್ದರೂ ಇಲ್ಲೇ ನೆಲಸಿದ್ದರು. ಇಲ್ಲಿ ಒಟ್ಟು 71 ಸರ್ಕಾರಿ ವಸತಿ ಗೃಹಗಳಿದ್ದು, 35 ಅಧಿಕಾರಿಗಳು ಮನೆಗಳಿಗಾಗಿ ಜಿಲ್ಲಾಧಿಕಾರಿಗಳಿಗೆ ಬೇಡಿಕೆ ಸಲ್ಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT