ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಬ್ಬಿಂಗ್ ಎಂಜಲು: ಸಿಪಿಕೆ

Last Updated 7 ಮೇ 2012, 19:30 IST
ಅಕ್ಷರ ಗಾತ್ರ

ಮೈಸೂರು: `ನಾಡಿನ ಎಲ್ಲ ಪ್ರಜ್ಞಾವಂತರು ಒಟ್ಟಾಗಿ ಡಬ್ಬಿಂಗ್ ವಿರುದ್ಧ ಹೋರಾಟಕ್ಕೆ ಇಳಿಯಬೇಕು~ ಎಂದು 78 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದ ಡಾ.ಸಿ.ಪಿ.ಕೃಷ್ಣಕುಮಾರ್ ಸೋಮವಾರ ಕರೆ ನೀಡಿದರು.

ನಗರದಲ್ಲಿ ಕನ್ನಡ ಚಳವಳಿ ಕೇಂದ್ರ ಸಮಿತಿಯು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಅಧ್ಯಕ್ಷರಿಗೆ ಆಯೋಜಿಸಿದ್ದ ಸನ್ಮಾನ ಸಮಾರಂಭದಲ್ಲಿ ಮಾತನಾಡಿದ ಅವರು, `ಇತರ ಭಾಷೆಯ ಚಿತ್ರಗಳು, ದೂರದರ್ಶನ ಕಾರ್ಯಕ್ರಮಗಳನ್ನು ಕನ್ನಡಕ್ಕೆ ಡಬ್ ಮಾಡುವುದನ್ನು ವಿರೋಧಿಸಬೇಕು. ಏಕೆಂದರೆ ಇದೊಂದು ರೀತಿಯ ಎಂಜಲು~ ಎಂದು ಹೇಳಿದರು.

`ಕನ್ನಡದ ಆರೋಗ್ಯದ ದೃಷ್ಟಿಯಿಂದ ನಮ್ಮ ಪ್ರೇಕ್ಷಕರು ಡಬ್ಬಿಂಗ್ ಚಿತ್ರಗಳು ಮತ್ತು ಕಾರ್ಯಕ್ರಮಗಳನ್ನು ನೋಡಬಾರದು. ಕನ್ನಡದಲ್ಲಿ ಸ್ವೋಪಜ್ಞತೆ ಇದೆ. ಅದನ್ನು ಉಳಿಸಿಕೊಳ್ಳಲು ಸಾಹಿತಿಗಳು, ಕಲಾವಿದರು, ಕನ್ನಡಪರ ಸಂಘಟನೆಗಳು ಒಟ್ಟಾಗಿ ಚಳವಳಿ ರೂಪಿಸಬೇಕು~ ಎಂದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT