ಬೆಂಗಳೂರು: ‘ಟಿಪ್ಪು ಸುಲ್ತಾನ್ ಕುರಿತಾಗಿ ವ್ಯತಿರಿಕ್ತ ಹೇಳಿಕೆ ನೀಡಿರುವ ಸಂಶೋಧಕ ಡಾ.ಎಂ ಚಿದಾನಂದ ಮೂರ್ತಿ ಅವರು ಕ್ಷಮೆಯಾಚಿಸಬೇಕು’ ಎಂದು ಟಿಪ್ಪು ಸುಲ್ತಾನ್ ಸಂಯುಕ್ತ ರಂಗದ ಅಧ್ಯಕ್ಷ ಅಹ್ಮದ್ ಖುರೇಶಿ ಆಗ್ರಹಿಸಿದರು.
ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಾಹಿತಿ ಕೋ.ಚೆನ್ನಬಸಪ್ಪ ಅವರು ಬರೆದ ‘ಅಪ್ರತಿಮ ದೇಶಭಕ್ತ ಟಿಪ್ಪು ಸುಲ್ತಾನ್’ ಕೃತಿಯ ಬಗ್ಗೆ ಸಂಶೋಧಕ ಚಿದಾನಂದ ಮೂರ್ತಿಯವರು ಮುಸ್ಲಿಮರ ಭಾವನೆಗಳಿಗೆ ಧಕ್ಕೆಯಾಗುವ ರೀತಿ ಮಾತನಾಡಿದ್ದಾರೆ. ಇತಿಹಾಸವನ್ನು ಸರಿಯಾಗಿ ಅಧ್ಯಯನ ಮಾಡದೇ ಟಿಪ್ಪು ಸುಲ್ತಾನ್ ಬಗ್ಗೆ ಇಲ್ಲ ಸಲ್ಲದ ಟೀಕೆ ಮಾಡಿದ್ದಾರೆ’ ಎಂದು ಹೇಳಿದರು.
ಡಿಎಸ್ಎಸ್ (ಅಂಬೇಡ್ಕರವಾದ) ರಾಜ್ಯ ಸಂಚಾಲಕ ಮಾವಳ್ಳಿ ಶಂಕರ್ ಮಾತನಾಡಿ, ‘ಟಿಪ್ಪು ದೇಶ ದ್ರೋಹಿ ಎಂಬ ದಾಖಲೆಗಳು ಚಿ.ಮೂ ಅವರಲ್ಲಿದ್ದರೆ ಬಹಿರಂಗ ಚರ್ಚೆಗೆ ಬರಲಿ’ ಎಂದು ಸವಾಲು ಹಾಕಿದರು.