ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಾ. ನಾ.ಸು. ಹರ್ಡೀಕರ್ 123ನೇ ಜನ್ಮದಿನಾಚರಣೆ:ಶಿಸ್ತು, ಸಂಯಮ: ಸೇವಾದಳದ ಪಾತ್ರ ಪ್ರಮುಖ

Last Updated 7 ಮೇ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: `ಜನರಲ್ಲಿ ಶಿಸ್ತು ಸಂಯಮ ಬೆಳೆಸುವಲ್ಲಿ ಭಾರತ ಸೇವಾ ದಳದ ಪಾತ್ರ ಪ್ರಮುಖವಾಗಿದೆ~ ಎಂದು ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ಹೇಳಿದರು.ನಗರದ ಸೇವಾ ದಳ ಕೇಂದ್ರದಲ್ಲಿ ಸೋಮವಾರ ನಡೆದ ಡಾ.ನಾ.ಸು. ಹರ್ಡೀಕರ್ ಅವರ 123 ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, `ಸೇವಾ ದಳದ ಸಂಸ್ಥಾಪಕ ನಾ.ಸು. ಹರ್ಡೀಕರ್ ಅವರು ಶಿಸ್ತು ಸಂಯಮಕ್ಕೆ ಹೆಸರಾಗಿದ್ದರು. ಅಂತಹ ವ್ಯಕ್ತಿಗಳನ್ನು ಪ್ರಸ್ತುತ ದಿನಗಳಲ್ಲಿ ಕಾಣುವುದು ಅಪರೂಪ~ ಎಂದು ಹೇಳಿದರು.

`ದೇಶದಲ್ಲಿ ಅಭಿವೃದ್ಧಿ ಕೆಲಸಗಳು ಸರಿಯಾಗಿ ನಡೆಯುತ್ತಿಲ್ಲ. ಇಂದಿನ ರಾಜಕಾರಣಿಗಳು ಕೇವಲ ಭಾಷಣದಲ್ಲಿ ನಿರತರಾಗಿದ್ದಾರೆ. ಇಂತಹ ಸನ್ನಿವೇಶದಲ್ಲಿ ದೇಶಕ್ಕಾಗಿ ಕೆಲಸ ಮಾಡುವ ಉತ್ಸಾಹಿ ಯುವ ಪಡೆಯನ್ನು ಸೃಷ್ಟಿಸಬೇಕಿದೆ~ ಎಂದು ಹೇಳಿದರು.

ಸೇವಾ ದಳದ ಕೇಂದ್ರ ಸಮಿತಿಯ ಉಪಾಧ್ಯಕ್ಷ ಶಿವಶರಣಪ್ಪ ವಾಲಿ, `ಮಾರ್ಗದರ್ಶನ ಮಾಡುವವರು ತತ್ವಗಳನ್ನು ಪಾಲಿಸಬೇಕು. ಇಲ್ಲದಿದ್ದರೆ ಮಾರ್ಗದರ್ಶನ ಮಾಡಿದರೂ ನಿಷ್ಪ್ರಯೋಜಕ~ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಸೇವಾ ದಳದ ಕೇಂದ್ರ ಕಾರ್ಯಕಾರಿ ಸಮಿತಿ ಸದಸ್ಯರಾದ ಡಾ.ವೂಡೇ ಪಿ.ಕೃಷ್ಣ, ಸಮಿತಿ ಸಂಘಟನಾ ಕಾರ್ಯದರ್ಶಿ ಕಲ್ಪನಾ ಶಿವಣ್ಣ, ಸ್ವಾತಂತ್ರ್ಯ ಹೋರಾಟಗಾರ ಎಸ್.ವಿ. ಮಂಜುನಾಥ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT