ಬುಧವಾರ ನಗರದಲ್ಲಿ ನಡೆದ ತೆರಿಗೆ ಭವನದ ಉದ್ಘಾಟನಾ ಸಮಾರಂಭದಲ್ಲಿ ಈ ಕುರಿತು ಪ್ರತಿಕ್ರಿಯಿಸಿದ ಅವರು, `ಬಿ.ಎಸ್. ಯಡಿಯೂರಪ್ಪ ಅವರು ಜಯದೇವ ಹೃದ್ರೋಗ ಆಸ್ಪತ್ರೆಯಿಂದ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾದ ಬೆನ್ನಲ್ಲಿಯೇ ಆಸ್ಪತ್ರೆಯ ಅಧೀಕ್ಷಕ ಡಾ. ತಿಲಕ್ ಅವರನ್ನು ಎತ್ತಂಗಡಿ ಮಾಡಲಾಗಿದೆ ಎಂದು ಕೆಲ ಮಾಧ್ಯಮಗಳಲ್ಲಿ ವರದಿಯಾಗಿದೆ. ಇದು ಸರಿಯಲ್ಲ~ ಎಂದರು. ಈ ತಿಂಗಳ 15ರಂದೇ ಡಾ. ತಿಲಕ್ ರಾಜೀನಾಮೆ ಸಲ್ಲಿಸಿದ್ದರು. ವೈದ್ಯಕೀಯ ಶಿಕ್ಷಣ ಸಚಿವರು ಕೂಡ ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದರು.