ಬೆಂಗಳೂರು: ಖಾಸಗಿ ಕ್ಷೇತ್ರದಲ್ಲಿ ಪರಿಶಿಷ್ಟ ಜಾತಿ ಹಾಗೂ ಪಂಗಡ ದವರಿಗೆ ಮೀಸಲಾತಿ ನೀಡುವ ಮಸೂದೆ ಮಂಡನೆಗೆ ಆಗ್ರಹಿಸಿ ಅಖಿಲ ಭಾರತ ಪರಿಶಿಷ್ಟ ಜಾತಿ ಹಾಗೂ ಪಂಗಡದ ಸಂಘಟನೆಗಳ ಒಕ್ಕೂಟ, ಆರ್ಪಿಐ ಹಾಗೂ ಸಮತಾ ಸೈನಿಕ ದಳದ ಸಹಯೋಗದಲ್ಲಿ ಇದೇ 16ರಂದು ದೆಹಲಿಯಲ್ಲಿ ರಾಷ್ಟ್ರ ಮಟ್ಟದ ಬೃಹತ್ ರ್ಯಾಲಿ ಹಮ್ಮಿಕೊಳ್ಳಲಾಗಿದೆ.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮತಾ ಸೈನಿಕ ದಳದ ರಾಜ್ಯಾಧ್ಯಕ್ಷ ಎಂ.ವೆಂಕಟಸ್ವಾಮಿ, ಜಂತರ್ಮಂತರ್ನಲ್ಲಿ ನಡೆಯುವ ಪ್ರತಿಭಟನೆಗೆ ರಾಜ್ಯದ 2 ಸಾವಿರ ಪ್ರತಿನಿಧಿಗಳು ತೆರಳಿದ್ದಾರೆ ಎಂದರು.
ವಿವಿಧ ರಾಜ್ಯಗಳಿಂದ ಒಂದು ಲಕ್ಷಕ್ಕೂ ಹೆಚ್ಚು ಪ್ರತಿನಿಧಿಗಳು ಈ ರ್ಯಾಲಿಯಲ್ಲಿ ಭಾಗವಹಿಸಲಿದ್ದು, ಲೋಕಸಭೆಗೆ ಮುತ್ತಿಗೆ ಹಾಕಿ ಪ್ರತಿಭಟಿಸುವ ಕಾರ್ಯಕ್ರಮವನ್ನೂ ಹಮ್ಮಿ ಕೊಳ್ಳಲಾಗಿದೆ ಎಂದು ಹೇಳಿದರು.