ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿಎಂಕೆ ಜೈಲ್‌ಭರೋ ಚಳವಳಿ

Last Updated 4 ಜುಲೈ 2012, 19:30 IST
ಅಕ್ಷರ ಗಾತ್ರ

ಚೆನ್ನೈ (ಪಿಟಿಐ):  ಎಐಎಡಿಎಂಕೆ ಸರ್ಕಾರ ಡಿಎಂಕೆ ಪಕ್ಷದ ಕಾರ್ಯಕರ್ತರ ವಿರುದ್ಧ ಸುಳ್ಳು ಮೊಕದ್ದಮೆ ದಾಖಲಿಸಿ ಅನಗತ್ಯ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿ ವಿರೋಧ ಪಕ್ಷ ಡಿಎಂಕೆ ಪಕ್ಷದ ಸಾವಿರಾರು ಕಾರ್ಯಕರ್ತರು ಸರ್ಕಾರದ ವಿರುದ್ಧ ಬುಧವಾರ ರಾಜ್ಯದಾದ್ಯಂತ `ಜೈಲ್ ಭರೋ~ ಚಳವಳಿ ನಡೆಸಿದರು.

ಡಿಎಂಕೆ ಮುಖ್ಯಸ್ಥ ಎಂ.ಕರುಣಾನಿಧಿ ಪುತ್ರ ಎಂ.ಕೆ.ಸ್ಟಾಲಿನ್ ಮತ್ತು ಪುತ್ರಿ ಕನಿಮೊಳಿ, ಕೇಂದ್ರದ ಮಾಜಿ ಸಚಿವರಾದ ದಯಾನಿಧಿ ಮಾರನ್ ಮತ್ತು ಟಿ.ಆರ್. ಬಾಲು ಅವರನ್ನು ಪ್ರತಿಭಟನೆ ವೇಳೆ ಬಂಧಿಸಲಾಯಿತು.

 `ಯಾವುದೇ ಸಾಕ್ಷ್ಯಾಧಾರಗಳಿಲ್ಲದೇ ತಮ್ಮ ಪಕ್ಷದ ನಾಯಕರನ್ನು ಬಂಧಿಸುವ ಮೂಲಕ ಎಐಎಡಿಎಂಕೆ ಸರ್ಕಾರ ರಾಜ್ಯದಲ್ಲಿ ಸೇಡಿನ ರಾಜಕೀಯ ಮಾಡುತ್ತಿದೆ~ ಎಂದು ಜಯಲಲಿತಾ ಸರ್ಕಾರದ ವಿರುದ್ಧ ಕನಿಮೊಳಿ ಕಿಡಿಕಾರಿದರು.

`ಜೈಲ್‌ಭರೋ ಚಳವಳಿ~ ಯಶಸ್ವಿಯಾಗಿದೆ ಎಂದು ಸ್ಟಾಲಿನ್ ಹೇಳಿಕೊಂಡರೆ, ಡಿಎಂಕೆ ಮುಖ್ಯಸ್ಥ ಕರುಣಾನಿಧಿ, `ಪ್ರತಿಭಟನೆಯಲ್ಲಿ 50 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಪಾಲ್ಗೊಂಡಿದ್ದರು~ ಎಂದು ಹೇಳಿದ್ದಾರೆ.

`ಪಕ್ಷದ ಕಾರ್ಯಕರ್ತರ ವಿರುದ್ಧ ಸುಳ್ಳು ಮೊಕದ್ದಮೆ ದಾಖಲಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ  ಜೈಲ್‌ಭರೋ ಚಳವಳಿ ನಡೆಸಲು ಇತ್ತೀಚೆಗೆ ನಡೆದ ಡಿಎಂಕೆಯ ತುರ್ತು ಕಾರ್ಯಕಾರಿ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಗಿತ್ತು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT