ಗದಗ: ಸಚಿವ ಡಿ.ಕೆ.ಶಿವಕುಮಾರ್ ಮಾಡಿರುವ ಅಕ್ರಮಗಳ ಬಗ್ಗೆ ದಾಖಲೆಗಳನ್ನು ಇದೇ 6ರಂದು ಹುಬ್ಬಳ್ಳಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಸಮಾಜ ಪರಿವರ್ತನಾ ಸಮುದಾಯದ ಅಧ್ಯಕ್ಷ ಎಸ್.ಆರ್.ಹಿರೇಮಠ ತಿಳಿಸಿದ್ದಾರೆ.
‘ವಿಜಾಪುರದಲ್ಲಿ ಡಿಕೆಶಿ ದಾಖಲೆ ಬಿಡುಗಡೆಗೆ ಸಂಬಂಧಿಸಿದಂತೆ ನಡೆಸಿದ ಪತ್ರಿಕಾಗೋಷ್ಠಿಗೂ ಗ್ರಾಮೀಣಾಭಿವೃದ್ಧಿ ಸಚಿವ ಎಚ್.ಕೆ. ಪಾಟೀಲ ಭೇಟಿಗೂ ಯಾವುದೇ ಸಂಬಂಧ ಇಲ್ಲ ಎಂದು ಅವರು ಭಾನುವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.