ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿವಿಎಸ್ ರಾಜೀನಾಮೆ ನೀಡಲಿ: ಎಚ್‌ಡಿಕೆ

Last Updated 24 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಮಂಗಳೂರು:  ಪಕ್ಷದೊಳಗೆ ನಿರಂತರ ಆಂತರಿಕ ಕಚ್ಚಾಟದ ನಡುವೆ ಆಡಳಿತ ನಡೆಸುವ ಬದಲು ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ರಾಜೀನಾಮೆ ನೀಡುವುದು ಒಳಿತು ಎಂದು ಜೆಡಿಎಸ್ ರಾಜ್ಯ ಘಟಕ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಸಲಹೆ ನೀಡಿದರು. 

 ಸುದ್ದಿಗಾರರೊಂದಿಗೆ ಮಾತನಾಡಿದ ಅವರು, `ದಕ್ಷಿಣ ಕನ್ನಡ ಜಿಲ್ಲೆಯ ಜನ ಸ್ವಾಭಿಮಾನಿಗಳು. ಎಲ್ಲೇ ಹೋದರೂ ಗೌರವಯುತವಾಗಿ ಬದುಕಿದವರು. ಡಿವಿಎಸ್ ಸ್ವಾಭಿಮಾನದ ಸಂಕೇತವಾಗಬೇಕು. ರಾಜೀನಾಮೆ ನೀಡಿ ಜಿಲ್ಲೆಯ ಗೌರವ ಉಳಿಸಬೇಕು~ ಎಂದು ಕಿವಿಮಾತು ಹೇಳಿದರು.

ಸರ್ಕಾರದ ಆಡಳಿತದಲ್ಲಿ ಜೆಡಿಎಸ್ ಹಸ್ತಕ್ಷೇಪವಿಲ್ಲ. ದೇವೇಗೌಡರ ಮಾರ್ಗದರ್ಶನದಂತೆ ಡಿವಿಎಸ್ ಕೆಲಸ ಮಾಡುತ್ತಾರೆ ಎಂಬುದು ಸುಳ್ಳು. ಅಂಥ ಒಂದು ಪ್ರಕರಣ ತೋರಿಸಿದರೂ ಆರೋಪಿಸುವವರಿಗೆ ತಲೆಬಾಗುವೆ ಎಂದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT