ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿವಿಎಸ್‌ರಿಂದ ಎಚ್‌ಡಿಕೆ ರಕ್ಷಣೆ: ಆರೋಪ

Last Updated 25 ಮೇ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: `ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಅವರು ತಮ್ಮ ಜಾತಿಯವರಾದ ಕೇಂದ್ರ ಸಚಿವ ಎಸ್.ಎಂ.ಕೃಷ್ಣ ಮತ್ತು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರನ್ನು ರಕ್ಷಿಸುವ ಪ್ರಯತ್ನ ಮಾಡುತ್ತಿದ್ದಾರೆ~ ಎಂದು ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ಆರೋಪಿಸಿದರು.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, `ಕೇಂದ್ರ ಉನ್ನತಾಧಿಕಾರ ಸಮಿತಿ (ಸಿಇಸಿ) ಗೆ ಮಾಹಿತಿ ನೀಡುವಲ್ಲಿ ಮುಖ್ಯಮಂತ್ರಿ ಅವರು ನಿಖರ ಮತ್ತು ಸ್ಪಷ್ಟವಾದ ಮಾಹಿತಿ ನೀಡದೆ, ತಪ್ಪು ಮಾಹಿತಿ ನೀಡಿದ್ದಾರೆ. ಸಿಇಸಿಗೆ ಮೇ 22 ರಂದು ವರದಿ ನೀಡಿದ್ದರೂ ಸಹ, ಮೇ 23ರಂದು ಬಿಜೆಪಿ ನಾಯಕರು ಈ ಬಗ್ಗೆ ಪ್ರಶ್ನಿಸಿದಾಗ ಸತ್ಯವನ್ನು ಹೇಳದೆ, ಇನ್ನು ಮೇಲೆ ಮಾಹಿತಿಯನ್ನು ನೀಡಬೇಕೆಂದು ಹೇಳಿದ್ದಾರೆ~ ಎಂದರು.

`ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಬಗೆಗೆ ಸಿಇಸಿ ವರದಿ ಕೇಳಿದಾಗ ನಾಲ್ಕು ದಿನಗಳಲ್ಲಿ ಮಾಹಿತಿ ನೀಡಿದ್ದರು. ಆದರೆ ಅವರ ಜಾತಿಯ ಮಾಜಿ ಮುಖ್ಯಮಂತ್ರಿಗಳ ವಿಚಾರದಲ್ಲಿ ಕಾಲಹರಣ ಮಾಡಿದ್ದಲ್ಲದೇ, ತಪ್ಪು ಮಾಹಿತಿಯನ್ನು ನೀಡಿದ್ದಾರೆ~ ಎಂದು ಆರೋಪಿಸಿದರು.

`ಗೃಹ ಸಚಿವ ಆರ್.ಅಶೋಕ ಮತ್ತು ಸದಾನಂದಗೌಡ ಇವರಿಬ್ಬರೂ ಕೃಷ್ಣ ಮತ್ತು ಕುಮಾರಸ್ವಾಮಿ ಅವರನ್ನು ಉಳಿಸುವ ತಂತ್ರವನ್ನು ಹೂಡುತ್ತಿದ್ದಾರೆ~ ಎಂದರು.`ಇದರ ಕುರಿತು ಮುಖ್ಯಮಂತ್ರಿ ಅವರನ್ನು ಕೇಳಿದಾಗ ಮಾಜಿಮುಖ್ಯ ಮಂತ್ರಿಗಳ ತನಿಖೆ ಮಾಡಬೇಕೆಂದು ಲೋಕಾಯುಕ್ತ ವರದಿಯಲ್ಲಿ ಎಲ್ಲೂ ಉಲ್ಲೇಖವಾಗಿಲ್ಲ ಎಂದು ಸಬೂಬು ನೀಡುತ್ತಾರೆ~ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT