ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಂಗುದಾಣ ಬೇಕು

Last Updated 6 ಜೂನ್ 2011, 12:55 IST
ಅಕ್ಷರ ಗಾತ್ರ

ಬೆಂಗಳೂರು-ಬಳ್ಳಾರಿ ರಸ್ತೆಯಲ್ಲಿರುವ ಕೊಡಿಗೇಹಳ್ಳಿ ಗೇಟ್ ಬಸ್ಸು ನಿಲ್ದಾಣದಲ್ಲಿದ್ದ ತಂಗುದಾಣವನ್ನು ಒಡೆದುಹಾಕಿ 4-5 ವರ್ಷವಾಗಿದೆ. ಮಳೆ ಬಂದರೆ ರಸ್ತೆಯಲ್ಲಿ ನಿಲ್ಲಲು ಆಗುವುದೇ ಇಲ್ಲ.

ವಯಸ್ಸಾದವರು, ಹೆಂಗಸರು ಹಾಗೂ ಶಾಲೆಗೆ ಹೋಗುವ ಮಕ್ಕಳಿಗಂತೂ ಬಸ್ಸಿಗೆ ಓಡಿಹೋಗಿ ಹತ್ತುವುದು ಯಮ ಯಾತನೆ. ಈ ಸಮಸ್ಯೆ ಬಗ್ಗೆ ಮಹಾನಗರಪಾಲಿಕೆ ಮತ್ತು ಪೊಲೀಸರಿಗೆ ಅನೇಕ ಸಲ ತಿಳಿಸಿದರೂ ಪ್ರಯೋಜನವಾಗಿರುವುದಿಲ್ಲ.
ಸಂಬಂಧಪಟ್ಟ ಅಧಿಕಾರಿಗಳೂ ಇನ್ನಾದರೂ ಗಮನಹರಿಸಿ ಕನಿಷ್ಠಪಕ್ಷ ತಾತ್ಕಾಲಿಕವಾಗಿಯಾದರೂ ಒಂದು ಜಿಂಕ್‌ಷೀಟ್ ಬಸ್ ತಂಗುದಾಣವನ್ನು, ಕೊಡಿಗೇಹಳ್ಳಿ ಗೇಟ್ ಬಳಿ (ಯಲಹಂಕ ಕಡೆಗೆ ಹೋಗುವ ಮಾರ್ಗ) ಮಳೆಗಾಲ ಪ್ರಾರಂಭವಾಗುವುದರ ಒಳಗೆ ಮುನ್ನ ನಿರ್ಮಾಣ ಮಾಡಿಕೊಡಬೇಕೆಂದು ವಿನಂತಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT