ಬೆಂಗಳೂರು: ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಪ್ರತಿಯೊಂದು ತಂಡಗಳು ತಮ್ಮ ಸಾಮರ್ಥ್ಯವನ್ನು ಪಣಕ್ಕಿಟ್ಟು ಆಡಬೇಕು. ಅಂದಾಗ ಮಾತ್ರ ಟ್ರೋಫಿ ಗೆಲ್ಲಲು ಸಾಧ್ಯವಾಗುತ್ತದೆ ಎಂದು ಭಾರತ ತಂಡದ ಮಾಜಿ ವೇಗಿ ಜಾವಗಲ್ ಶ್ರೀನಾಥ್ ಅಭಿಪ್ರಾಯ ಪಟ್ಟಿದ್ದಾರೆ.
ಉಪ ಖಂಡದಲ್ಲಿ ಈ ಟೂರ್ನಿ ನಡೆಯುವುದರಿಂದ ವೇಗ ಹಾಗೂ ಸ್ಪಿನ್ ಬೌಲರ್ಗಳ ಮೇಲೆ ಹೆಚ್ಚಿನ ಜವಾಬ್ದಾರಿ ಇರುತ್ತದೆ. ಬ್ಯಾಟ್ಸ್ಮನ್ಗಳ ಮೇಲೆ ಹೆಚ್ಚಿನ ಒತ್ತಡ ತರಲು ಕೌಶಲಯುತ ಬೌಲಿಂಗ್ ನಡೆಸಬೇಕು. ಸಾಮರ್ಥ್ಯವನ್ನು ಪೂರ್ಣವಾಗಿ ಬಳಸಿಕೊಳ್ಳಬೇಕು ಎಂದು ಶ್ರೀನಾಥ್ ನುಡಿದಿದ್ದಾರೆ.