ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಂಡದಲ್ಲಿ ಒಡಕು ಇಲ್ಲ: ರಾಹುಲ್ ದ್ರಾವಿಡ್

Last Updated 11 ಜನವರಿ 2012, 19:30 IST
ಅಕ್ಷರ ಗಾತ್ರ

ಪರ್ತ್ (ಪಿಟಿಐ): ಭಾರತ ಕ್ರಿಕೆಟ್ ತಂಡದೊಳಗೆ ಯಾವುದೇ ಒಡಕು ಇಲ್ಲ. ಎಲ್ಲರೂ ಒಗ್ಗಟ್ಟಿನಲ್ಲಿ ಇದ್ದಾರೆ ಎಂದು ಹಿರಿಯ ಬ್ಯಾಟ್ಸ್‌ಮನ್ ರಾಹುಲ್ ದ್ರಾವಿಡ್ ನುಡಿದಿದ್ದಾರೆ. ಈ ಮೂಲಕ ಆಸ್ಟ್ರೇಲಿಯಾ ಮಾಧ್ಯಮಗಳಲ್ಲಿ ಬಂದ ವರದಿಯನ್ನು ನಿರಾಕರಿಸಿದ್ದಾರೆ.

ಬಾರ್ಡರ್-ಗಾವಸ್ಕರ್ ಟೆಸ್ಟ್ ಸರಣಿಯಲ್ಲಿ ಸತತ ಎರಡು ಸೋಲು ಅನುಭವಿಸಿದ ಪ್ರವಾಸಿ ತಂಡದಲ್ಲಿ ಎಲ್ಲವೂ ನೆಟ್ಟಗಿಲ್ಲ ಎಂದು `ದಿ ಕೊರಿಯರ್ ಮೇಲ್~ ಮಂಗಳವಾರ ವರದಿ ಮಾಡಿತ್ತು. ವೀರೇಂದ್ರ ಸೆಹ್ವಾಗ್ ಕೆಲವು ಆಟಗಾರರ ಮೂಲಕ ಗುಂಪುಗಾರಿಕೆ ನಡೆಸುತ್ತಿದ್ದಾರೆ ಎಂದೂ ವರದಿ ತಿಳಿಸಿತ್ತು.

ಸೆಹ್ವಾಗ್ ಮತ್ತು ನಾಯಕ ದೋನಿ ನಡುವೆ ಭಿನ್ನಾಭಿಪ್ರಾಯ ಮೂಡಿದೆ ಎಂಬ ವರದಿ ಸತ್ಯಕ್ಕೆ ದೂರವಾದುದು ಎಂದು ದ್ರಾವಿಡ್ ಹೇಳಿದರು.

`ಕಳಪೆ ಪ್ರದರ್ಶನ ನೀಡಿದರೆ ತಂಡದಲ್ಲಿ ಎಲ್ಲವೂ ನೆಟ್ಟಗಿಲ್ಲ ಎಂಬಂತೆ ಬಿಂಬಿಸಲಾಗುತ್ತದೆ. ಸೆಹ್ವಾಗ್ ಹಾಗೂ ದೋನಿಗೆ ಸಂಬಂಧಿಸಿದಂತೆ ಎದ್ದಿರುವ ವರದಿಯಲ್ಲಿ ಯಾವುದೇ ಹುರುಳಿಲ್ಲ. ತಂಡದ ಸ್ಫೂರ್ತಿ ಚೆನ್ನಾಗಿಯೇ ಇದೆ~ ಎಂದು ವರದಿಗಾರರಿಗೆ ತಿಳಿಸಿದರು.

`ತಂಡದ ಕೆಲವು ಆಟಗಾರರು ದೋನಿ ಬದಲಿಗೆ ಸೆಹ್ವಾಗ್ ನಾಯಕತ್ವ ವಹಿಸಿಕೊಳ್ಳಬೇಕೆಂದು ಒತ್ತಾಯಿಸುತ್ತಿದ್ದಾರೆ. ಸ್ವತಃ ಮಹಿ ತಂಡದ ಹಿತವನ್ನು ಪರಿಗಣಿಸದೆಯೇ ಆಡುತ್ತಿದ್ದಾರೆ~ ಎಂದು ವರದಿಯಲ್ಲಿ ತಿಳಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT