ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಜ್ಞರ ನೇಮಕಕ್ಕೆ ಸಿದ್ಧ: ಸಿ.ಎಂ

Last Updated 10 ಜನವರಿ 2012, 19:05 IST
ಅಕ್ಷರ ಗಾತ್ರ

ಬೆಂಗಳೂರು: `ನಂದಿಕೂರು ಶಾಖೋತ್ಪನ್ನ ವಿದ್ಯುತ್ ಸ್ಥಾವರದಿಂದ ಸ್ಥಳೀಯ ಪರಿಸರದ ಮೇಲೆ ಆಗುತ್ತಿರುವ ಹಾನಿ ಕುರಿತು ಅಧ್ಯಯನ ನಡೆಸಲು ನೇಮಕಗೊಂಡಿದ್ದ ಸಮಿತಿಯ ಎರಡು ಸ್ಥಾನಗಳಿಗೆ ಪೇಜಾವರ ಮಠಾಧೀಶ ವಿಶ್ವೇಶತೀರ್ಥ ಸ್ವಾಮೀಜಿ ಅವರು ಸೂಚಿಸುವ ವ್ಯಕ್ತಿಗಳನ್ನು ನೇಮಕ ಮಾಡಲು ಸಿದ್ಧ~ ಎಂದು ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಹೇಳಿದರು.

ಗೃಹ ಕಚೇರಿ `ಕೃಷ್ಣಾ~ದಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, `ಸಮಿತಿಯ ಇಬ್ಬರು ಸದಸ್ಯರು ತಮ್ಮ ಕಾರ್ಯವ್ಯಾಪ್ತಿ ಮೀರಿ ವರ್ತಿಸಿದ ಕಾರಣ ಅವರನ್ನು ಸಮಿತಿಯಿಂದ ಕೈಬಿಡಲಾಯಿತು~ ಎಂದು ತಿಳಿಸಿದರು.

`ಸಮಿತಿಯ ಸದಸ್ಯರಾಗಿದ್ದ ವೈ.ಬಿ. ರಾಮಕೃಷ್ಣ ಮತ್ತು ಟಿ.ವಿ. ರಾಮಚಂದ್ರ ಅವರು ವರದಿಯ ಅಂಶಗಳನ್ನು ಸರ್ಕಾರಕ್ಕೆ ಸಲ್ಲಿಸುವ ಮೊದಲೇ ಮಾಧ್ಯಮಗಳಿಗೆ ತಿಳಿಸುತ್ತಿದ್ದರು. ಇವರನ್ನು ಹೊರತುಪಡಿಸಿ ಬೇರೆ ತಜ್ಞರನ್ನು ಸ್ವಾಮೀಜಿ ಸೂಚಿಸಿದರೆ ಅವರನ್ನೇ ನೇಮಕ ಮಾಡಲಾಗುವುದು~ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT