ತರಕಾರಿ, ಮೀನು, ಮಟನ್ ಮಾರ್ಕೆಟ್ ಇರುವ ಈ ಪ್ರದೇಶದಲ್ಲಿ ರಸ್ತೆ, ಗಟಾರು, ನೀರು, ಶೌಚಾಲಯದ ಸೌಲಭ್ಯವಿಲ್ಲದ ಕಾರಣ ವ್ಯಾಪಾರಸ್ಥರಿಗೆ ಹಾಗೂ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿದೆ. ಈ ಕುರಿತು ಪಾಲಿಕೆಗೆ ಹಲವು ಬಾರಿ ಮನವಿ ಮಾಡಿಕೊಂಡರೂ ಪಾಲಿಕೆ ಈ ಕಡೆ ಗಮನ ಹರಿಸಿಲ್ಲ ಎಂದು ಆರೋಪಿಸಿದರು.
ಎನ್.ಎಚ್. ಕೋನರೆಡ್ಡಿ, ಸುರೇಶ ಹಿರೇಮಠ, ಮೋಹನ ಅರ್ಕಸಾಲಿ, ಮುಜಾಹಿದ್ ಕಾಂಟ್ರ್ಯಾಕ್ಟರ್, ಪಾಲಿಕೆ ಸದಸ್ಯರಾದ ರಾಜಣ್ಣ ಕೊರವಿ, ವಿಜಯಲಕ್ಷ್ಮೀ ಲೂತಿಮಠ, ಸರೋಜಾ ಪಾಟೀಲ, ಖಾತೂನಬಿ ತಮಾಟಗಾರ ಭಾಗವಹಿಸಿದ್ದರು.